ಈ ಬಗ್ಗೆ ನೀಡಿರುವ ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ಸ್ವೀಕರಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್ ಮತ್ತು ಪದಾಧಿಕಾರಿಗಳು ಮಾಹಿತಿ ನೀಡಿ, ಬೆಂಗಳೂರಿನಲ್ಲಿ ವಾಸವಿದ್ದು, ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಅಥವಾ ಇತರೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳನ್ನು ಮಾತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಣೆಗೆ ಪಡೆಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ವಾಸ ಇರುವ ಶಿಕ್ಷಕರು ಅಥವಾ ಇತರೆ ಇಲಾಖೆಯ ಅಧಿಕಾರಿಗಳನ್ನು ಬಿಬಿಎಂಪಿ ವ್ಯಾಪ್ತಿಯ ಕರ್ತವ್ಯಕ್ಕೆ ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.