ಸತತ ಪ್ರಚಾರ ನೀಡಿದರೂ ಇ-ಕೆವೈಸಿ ಮಾಡಿಸಲು ರೈತರು ಉತ್ಸಾಹ ತೋರದೆ ದಿನಾಂಕವನ್ನು ವಿಸ್ತರಿಸಲಾಗಿದೆ. ಅಲ್ಲದೇ, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಶನಿವಾರ ಮತ್ತು ಭಾನುವಾರ ಇ-ಕೆವೈಸಿ ನೋಂದಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಲವು ರೈತರ ಆಧಾರ್ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿಲ್ಲ. ಮತ್ತೊಂದೆಡೆ ಇ-ಕೆವೈಸಿ ದೋಷದಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.