ರೈತ ಮುಖಂಡ ರಾಮಾಂಜಿನಪ್ಪ ಮಾತನಾಡಿ, ಕೊನಘಟ್ಟ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಗ್ರಾಮಗಳ ರೈತರಿಗೆ ಸೇರಿರುವ 971ಎಕರೆ ಫಲವತ್ತಾದ ಕೃಷಿ ಜಮೀನು ಸ್ವಾಧೀನವಾಗುತ್ತಿದೆ. ದ್ರಾಕ್ಷಿ, ಬಾಳೆ, ರೇಷ್ಮೆ, ತೆಂಗು, ಮಾವು ಸೇರಿದಂತೆ ವಿವಿಧ ತರಕಾರಿ ಬೆಳ ಬೆಳೆಯುತ್ತಿರುವ ಜಮೀನುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸ್ವಾಧೀನಕ್ಕೆ ಒಳಪಡುತ್ತಿರುವುದು. ಇಂತಹ ಭೂಮಿಗೆ ಕೆಐಎಡಿಬಿ ಅಧಿಕಾರಿಗಳು ಸೂಕ್ತ ದರ ನೀಡದೆ ರೈತರು ಹೇಗೆ ಬಿಟ್ಟುಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.