<p><strong>ದೇವನಹಳ್ಳಿ</strong>: 18 ವರ್ಷ ಮೇಲ್ಪಟ್ಟ ವಯಸ್ಸಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಸಿಕೊಳ್ಳಲು ಹಾಗೂ ಪ್ರತಿಯೊಬ್ಬರು ಕನಿಷ್ಠ ಐದು ಯುವ ಮತದಾರರಿಗೆ ಗುರುತಿನ ಚೀಟಿ ಮಾಡಿಸಲು ಅರಿವು ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್. ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಮತದಾರರ ಪಟ್ಟಿ 2024ರ ವಿಶೇಷ ಪರಿಷ್ಕರಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮತದಾರರು ಮತದಾರರ ಪಟ್ಟಿಯ ಪರಿಷ್ಕರಣೆಯ ಅನುಕೂಲ ಪಡೆಯಬೇಕು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳುವ ಯುವ ಮತದಾರರು ತಮ್ಮ ತಮ್ಮ ಸ್ನೇಹಿತರಿಗೂ, ವಿದ್ಯಾರ್ಥಿಗಳಿಗೂ ಮತದಾರರ ಪಟ್ಟಿಗೆ ಸೇರಿಸುವ ವಿಷಯವನ್ನು ತಿಳಿಸಬೇಕು ಎಂದು ಸಲಹೆ ನೀಡಿದರು.</p>.<p>ತಮ್ಮ ಹಕ್ಕನ್ನು ಚಲಾಯಿಸಿದರೆ ಮಾತ್ರ ಈ ದೇಶದ ಅಭಿವೃದ್ಧಿಗೆ ನಿಮ್ಮ ಕೊಡುಗೆ ನೀಡಿದಂತಾಗುತ್ತದೆ. ಹೊಸ ಮತದಾರರ ನೋಂದಣೆಗಾಗಿ ನಮೂನೆ-6, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ-7, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಗೆ ನಮೂನೆ-6(ಬಿ) ಮತ್ತು ವಾಸಸ್ಥಳ ಬದಲಾವಣೆ ಒಳಗೊಂಡ ಇತರೆ ತಿದ್ದುಪಡಿಗಾಗಿ ನಮೂನೆ-8 ಅರ್ಜಿಗಳನ್ನು ಬಿ.ಎಲ್.ಓ ಗಳಿಗೆ ನೀಡುವ ಅಥವಾ ವಿ.ಎಚ್.ಎಫ್ ಮುಖಾಂತರ ಸಲ್ಲಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.</p>.<p>ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವರಾಜ್, ಇಒ ಶ್ರೀನಾಥ್ ಗೌಡ, ಪ್ರಾಂಶುಪಾಲ ಮಂಜಯ್ಯ, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ರಾಜಸ್ವ ನಿರೀಕ್ಷಕ ಮಹೇಶ್, ಗ್ರಾಮ ಲೆಕ್ಕಿಗ ಸಂತೋಷ್, ಕಾಲೇಜು ಸಿಬ್ಬಂದಿ. ಪುರಸಭೆ ಕಂದಾಯಾಧಿಕಾರಿ ಮಂಜುನಾಥ್ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: 18 ವರ್ಷ ಮೇಲ್ಪಟ್ಟ ವಯಸ್ಸಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಸಿಕೊಳ್ಳಲು ಹಾಗೂ ಪ್ರತಿಯೊಬ್ಬರು ಕನಿಷ್ಠ ಐದು ಯುವ ಮತದಾರರಿಗೆ ಗುರುತಿನ ಚೀಟಿ ಮಾಡಿಸಲು ಅರಿವು ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್. ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಮತದಾರರ ಪಟ್ಟಿ 2024ರ ವಿಶೇಷ ಪರಿಷ್ಕರಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮತದಾರರು ಮತದಾರರ ಪಟ್ಟಿಯ ಪರಿಷ್ಕರಣೆಯ ಅನುಕೂಲ ಪಡೆಯಬೇಕು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳುವ ಯುವ ಮತದಾರರು ತಮ್ಮ ತಮ್ಮ ಸ್ನೇಹಿತರಿಗೂ, ವಿದ್ಯಾರ್ಥಿಗಳಿಗೂ ಮತದಾರರ ಪಟ್ಟಿಗೆ ಸೇರಿಸುವ ವಿಷಯವನ್ನು ತಿಳಿಸಬೇಕು ಎಂದು ಸಲಹೆ ನೀಡಿದರು.</p>.<p>ತಮ್ಮ ಹಕ್ಕನ್ನು ಚಲಾಯಿಸಿದರೆ ಮಾತ್ರ ಈ ದೇಶದ ಅಭಿವೃದ್ಧಿಗೆ ನಿಮ್ಮ ಕೊಡುಗೆ ನೀಡಿದಂತಾಗುತ್ತದೆ. ಹೊಸ ಮತದಾರರ ನೋಂದಣೆಗಾಗಿ ನಮೂನೆ-6, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ-7, ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಗೆ ನಮೂನೆ-6(ಬಿ) ಮತ್ತು ವಾಸಸ್ಥಳ ಬದಲಾವಣೆ ಒಳಗೊಂಡ ಇತರೆ ತಿದ್ದುಪಡಿಗಾಗಿ ನಮೂನೆ-8 ಅರ್ಜಿಗಳನ್ನು ಬಿ.ಎಲ್.ಓ ಗಳಿಗೆ ನೀಡುವ ಅಥವಾ ವಿ.ಎಚ್.ಎಫ್ ಮುಖಾಂತರ ಸಲ್ಲಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.</p>.<p>ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವರಾಜ್, ಇಒ ಶ್ರೀನಾಥ್ ಗೌಡ, ಪ್ರಾಂಶುಪಾಲ ಮಂಜಯ್ಯ, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ರಾಜಸ್ವ ನಿರೀಕ್ಷಕ ಮಹೇಶ್, ಗ್ರಾಮ ಲೆಕ್ಕಿಗ ಸಂತೋಷ್, ಕಾಲೇಜು ಸಿಬ್ಬಂದಿ. ಪುರಸಭೆ ಕಂದಾಯಾಧಿಕಾರಿ ಮಂಜುನಾಥ್ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>