ನಾಗಮಂಗಲ, ಚೌಡನಹಳ್ಳಿ, ಬೋವಿಪಾಳ್ಯ, ಸಿಂಗ್ರಹಳ್ಳಿ ,ಬೆಟ್ಟೆನಹಳ್ಳಿ ಸುತ್ತಮುತ್ತ ವ್ಯಾಪ್ತಿಯ ನೀರಾವರಿ ಪಂಪ್ ಸೆಟ್ಗಳಿಗೆ ವಿದ್ಯುತ್ ಪೂರೈಕೆ ಯಾವಾಗ ಬರಲಿದೆ ಎಂದು ಕುಡಿಯುವ ನೀರಿಗಾಗಿ ಸಾರ್ವಜನಿಕರು, ರೈತರು ಹಗಲುರಾತ್ರಿ ಚಾತಕ ಪಕ್ಷಿಯಂತೆ ಕಾಯುವಂತಾಗಿದೆ. ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸಕಾಲದಲ್ಲಿ ವಿದ್ಯುತ್ ಪೂರೈಕೆ ಇಲ್ಲದೆ ವ್ಯರ್ಥವಾಗಿದೆ. ಓವರ್ ಹೆಡ್ ಟ್ಯಾಂಕ್ಗಳ ಕತೆ ಹೇಳತೀರದಾಗಿದೆ ಎಂದು ಆರೋಪಿಸಿದರು.