ಈ ಸಂದರ್ಭದಲ್ಲಿ ಮಾತನಾಡಿದ ಸಿ.ಗೀತಾಮಣಿ, ’ನಗರ ಪ್ರದೇಶದಲ್ಲಿ ತಾರಸಿ ತೋಟ ಇತ್ತೀಚೆಗೆ ಹೆಚ್ಚು ಜನ ಮನ್ನಣೆ ಪಡೆದಿದೆ. ಗ್ರಾಮೀಣ ಭಾಗದಲ್ಲಿ ಹಿತ್ತಲಿನಲ್ಲಿ ಮನೆಗೆ ಅಗತ್ಯ ಇರುವ ಬಹುತೇಕ ತರಕಾರಿಗಳನ್ನು ಬೆಳೆದುಕೊಳ್ಳುವ ಪದ್ದತಿ ಹಿಂದಿನಿಂದಲೂ ಇತ್ತು. ಸದ್ಯಕ್ಕೆ ಎಲ್ಲದ್ದಕ್ಕೂ ನಗರದಲ್ಲಿನ ಮಾರುಕಟ್ಟೆಯನ್ನು ಆಶ್ರಯಿಸುತ್ತಿರುವುದರಿಂದ ಅಪೌಷ್ಟಿಕತೆ ಹೆಚ್ಚುತ್ತಿದೆ’ ಎಂದು ಅಭಿಪ್ರಾಯಪಟ್ಟರು.