ದೇವನಹಳ್ಳಿ:ರಾಜ್ಯ ಒಕ್ಕಲಿಗರ ಸಂಘದಲ್ಲಿ ಸಾಕಷ್ಟು ಬದಲಾವಣೆ ತರಬೇಕಾಗಿರುವ ಉದ್ದೇಶದಿಂದ ಈ ಬಾರಿ ಹೊಸ ಅಭ್ಯರ್ಥಿಗಳೆಲ್ಲರೂ ಸಿಂಡಿಕೇಟ್ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಳಂಕರಹಿತ ಅಭ್ಯರ್ಥಿಗಳಿಗೆ ಮತದಾರರು ಮತ ನೀಡಬೇಕು ಎಂದು ಒಕ್ಕಲಿಗರ ಸಂಘದ ಚುನಾವಣೆಯ ಅಭ್ಯರ್ಥಿ ಡಾ.ಆಂಜಿನಪ್ಪ ಮನವಿ ಮಾಡಿದರು.
ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದ ಅಸ್ತಿತ್ವ ಪಡೆದುಕೊಂಡ ಒಕ್ಕಲಿಗರ ಸಂಘವು ಸುಮಾರು ₹ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದೆ. ಜನರಿಗೆ ಆರೋಗ್ಯ ನೀಡುವ ಸಲುವಾಗಿ ಸಾಕಷ್ಟು ಸೇವೆ ಮಾಡುತ್ತಿದ್ದರೂ ಆಡಳಿತಾಧಿಕಾರಿ ಮೂಲಕ ನಿರ್ವಹಣೆ ಮಾಡುತ್ತಿರುವುದಕ್ಕೆ ಹಿಂದಿನ ಸಾಲಿನಲ್ಲಿ ಜನರಿಂದ ಆಯ್ಕೆಯಾಗಿರುವವರೇ ನೇರ ಹೊಣೆಗಾರರಾಗಿದ್ದಾರೆ ಎಂದು ಟೀಕಿಸಿದರು.
ಅಭ್ಯರ್ಥಿ ಪುಟ್ಟೇಗೌಡ, ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ. ನಾರಾಯಣಸ್ವಾಮಿ, ಭುವನಹಳ್ಳಿ ಮುನಿರಾಜು ಹಾಜರಿದ್ದರು.