‘ನಮ್ಮ ಆರೋಗ್ಯವನ್ನು ನಾವೇ ಕಾಪಾಡಬೇಕು. ರೋಗಗಳು ಬರುವುದಕ್ಕಿಂತ ಮೊದಲೇ ಮುಂಜಾಗ್ರತೆ ಅಗತ್ಯ. ಕಸ ವಿಲೇವಾರಿ ಮಾಡುವುದು, ಚರಂಡಿ ಶುಚಿತ್ವ, ರಸ್ತೆ ಬದಿಯ ಮಣ್ಣು ಹೊರಹಾಕುವುದು, ಕಾರ್ಮಿಕರ ಕರ್ತವ್ಯವಾದರೂ ದೂಳು ದುರ್ವಾಸನೆಯಲ್ಲೇ ಹೆಚ್ಚು ಸಮಯ ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆದ್ದರಿಂದ ಧರಿಸುವ ಸಮವಸ್ತ್ರ, ಕೈಗವಸು ಶುಚಿತ್ವ ಮಾಡುವಾಗ ಬಿಸಿನೀರಿನಲ್ಲಿ ಒಂದು ಬಾರಿ ಹಾಕಿ ಬಿಸಲಿನಲ್ಲಿ ಒಣಗಿಸಬೇಕು. ಇದು ಅನೇಕ ರೋಗಾಣುಗಳ ಕಡಿವಾಣಕ್ಕೆ ಸಹಕಾರಿಯಾಗಲಿದೆ. ಕುಡಿಯುವ ನೀರು, ಪೌಷ್ಟಿಕ ಆಹಾರಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.