ಸೂಲಿಬೆಲೆ: ‘ಪಟ್ಟಣದಲ್ಲಿ ಟ್ರಾನ್ಸಫಾರ್ಮರ್ ಸುಟ್ಟು ಹೋಗಿದೆ ಎಂದು ಶನಿವಾರ ದೂರು ನೀಡಲಾಗಿದೆ. ಎರಡು ದಿನದಿಂದ ವಿದ್ಯುತ್ ಇಲ್ಲದೆ ಬೆಳೆಗಳು ಒಣಗುತ್ತಿರುವುದರಿಂದ, ಕಚೇರಿಗೆ ಭೇಟಿ ನೀಡಿ ವಿಚಾರಿಸಲು ಬಂದರೆ ಬೆಸ್ಕಾಂ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಿಬ್ಬಂದಿಯೇ ಇಲ್ಲ’ ಎಂದು ಸೂಲಿಬೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮರವೆ ಕೃಷ್ಣಪ್ಪ ಆರೋಪಿಸಿದ್ದಾರೆ.