<p><strong>ದೇವನಹಳ್ಳಿ:</strong> ಜೀವನವಿಡೀ ಸರ್ಕಾರಿ ಸೇವೆಗಾಗಿಯೇ ಕರ್ತವ್ಯ ನಿರ್ವಹಿಸುವ ನೌಕರರಿಗೆ ಅವರ ನಿವೃತ್ತಿ ನಂತರ ಬದುಕಲು ಆರ್ಥಿಕ ಬಲದ ಅಗತ್ಯವಿದೆ. ಇದಕ್ಕಾಗಿ ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಸರ್ಕಾರಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ನೂರಾರು ಸರ್ಕಾರಿ ನೌಕರರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಎನ್ಪಿಎಸ್ ಸಹವಾಸ, ಕುಟುಂಬದವರು ಉಪವಾಸ; ಬೇಕೇ ಬೇಕು ಒಪಿಎಸ್ ಬೇಕು ಎಂದು ಘೋಷಣೆ ಕೂಗಿದರು.</p>.<p>ಈಗಾಗಲೇ, ಎನ್ಪಿಎಸ್ ಯೋಜನೆಯನ್ನು ರಾಜಸ್ಥಾನ, ಛತ್ತೀಸ್ಗಡ, ಜಾರ್ಖಂಡ್ ಹಾಗೂ ಪಂಜಾಬ್ ರಾಜ್ಯಗಳಲ್ಲಿ ರದ್ದುಪಡಿಸಲಾಗಿದೆ. ರಾಜ್ಯ ಸರ್ಕಾರವೂ ಸರ್ಕಾರಿ ನೌಕರರ ಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಒಪಿಎಸ್ ಯೋಜನೆ ಜಾರಿಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಒಪಿಎಸ್ ಜಾರಿಯಿಂದ ನೌಕರರು ಹಾಗೂ ಅವರ ಅವಲಂಬಿತರ ಜೀವನಕ್ಕೆ ಅನುಕೂಲವಾಗುತ್ತದೆ. ಸರ್ಕಾರ ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.</p>.<p>ಶಿರಸ್ತೇದಾರ್ ಭರತ್, ಉಪ ತಹಶೀಲ್ದಾರ್ ಚೈತ್ರಾ, ಪಿಡಿಒ ಸಂಘದ ಅಧ್ಯಕ್ಷ ಬಿರೇಶ್, ಕಾರ್ಯದರ್ಶಿ ಪದ್ಮಮ್ಮ, ಶಿಕ್ಷಕ ಸಂಘದ ಆದರ್ಶ್, ಕಂದಾಯ ನೌಕರರ ಸಂಘ, ಪೌರ ಕಾರ್ಮಿಕರ ಸಂಘ, ಬೆಸ್ಕಾಂ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು<br />ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಜೀವನವಿಡೀ ಸರ್ಕಾರಿ ಸೇವೆಗಾಗಿಯೇ ಕರ್ತವ್ಯ ನಿರ್ವಹಿಸುವ ನೌಕರರಿಗೆ ಅವರ ನಿವೃತ್ತಿ ನಂತರ ಬದುಕಲು ಆರ್ಥಿಕ ಬಲದ ಅಗತ್ಯವಿದೆ. ಇದಕ್ಕಾಗಿ ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಸರ್ಕಾರಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ನೂರಾರು ಸರ್ಕಾರಿ ನೌಕರರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಎನ್ಪಿಎಸ್ ಸಹವಾಸ, ಕುಟುಂಬದವರು ಉಪವಾಸ; ಬೇಕೇ ಬೇಕು ಒಪಿಎಸ್ ಬೇಕು ಎಂದು ಘೋಷಣೆ ಕೂಗಿದರು.</p>.<p>ಈಗಾಗಲೇ, ಎನ್ಪಿಎಸ್ ಯೋಜನೆಯನ್ನು ರಾಜಸ್ಥಾನ, ಛತ್ತೀಸ್ಗಡ, ಜಾರ್ಖಂಡ್ ಹಾಗೂ ಪಂಜಾಬ್ ರಾಜ್ಯಗಳಲ್ಲಿ ರದ್ದುಪಡಿಸಲಾಗಿದೆ. ರಾಜ್ಯ ಸರ್ಕಾರವೂ ಸರ್ಕಾರಿ ನೌಕರರ ಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಒಪಿಎಸ್ ಯೋಜನೆ ಜಾರಿಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಒಪಿಎಸ್ ಜಾರಿಯಿಂದ ನೌಕರರು ಹಾಗೂ ಅವರ ಅವಲಂಬಿತರ ಜೀವನಕ್ಕೆ ಅನುಕೂಲವಾಗುತ್ತದೆ. ಸರ್ಕಾರ ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.</p>.<p>ಶಿರಸ್ತೇದಾರ್ ಭರತ್, ಉಪ ತಹಶೀಲ್ದಾರ್ ಚೈತ್ರಾ, ಪಿಡಿಒ ಸಂಘದ ಅಧ್ಯಕ್ಷ ಬಿರೇಶ್, ಕಾರ್ಯದರ್ಶಿ ಪದ್ಮಮ್ಮ, ಶಿಕ್ಷಕ ಸಂಘದ ಆದರ್ಶ್, ಕಂದಾಯ ನೌಕರರ ಸಂಘ, ಪೌರ ಕಾರ್ಮಿಕರ ಸಂಘ, ಬೆಸ್ಕಾಂ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು<br />ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>