<p><strong>ಆನೇಕಲ್: </strong>ತಾಲ್ಲೂಕಿನ ಹುಸ್ಕೂರು ಸಮೀಪದಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ಜಿಲ್ಲಾಡಳಿತ ಶುಕ್ರವಾರ ತೆರವುಗೊಳಿಸಿ ಅಂದಾಜು ₹90ಲಕ್ಷ ಮೌಲ್ಯದ ಜಾಗವನ್ನು ರಕ್ಷಿಸಿ ವಶಪಡಿಸಿಕೊಂಡಿತು.</p>.<p>ಹುಸ್ಕೂರು ಸರ್ವೆ ನಂ.163ರಲ್ಲಿ 20ಗುಂಟೆ ಕೆರೆಯ ಜಾಗ ಹಲವು ವರ್ಷಗಳಿಂದ ಒತ್ತುವರಿಯಾಗಿತ್ತು. ಜಿಲ್ಲಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ಒತ್ತುವರಿ ತೆರವುಗೊಳಿಸಿದರು.</p>.<p>ಸರ್ಕಾರಿ ಜಾಗಗಳನ್ನು ರಕ್ಷಣೆ ಮಾಡಬೇಕಾದುದ್ದು ಜಿಲ್ಲಾಡಳಿತದ ಗುರಿ. ಈ ನಿಟ್ಟಿನಲ್ಲಿ ಸರ್ಕಾರಿ ಜಾಗಗಳ ಒತ್ತುವರಿ ತೆರವಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಕೆರೆಯ ಜಾಗ ಒತ್ತುವರಿಯನ್ನು ತೆರವುಗೊಳಿಸಿದ್ದರಿಂದ ಜಲಮೂಲ ರಕ್ಷಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲೆಡೆ ಕಂದಾಯ ಇಲಾಖೆಯ ಸಕ್ರಿಯರಾಗಿ ಸರ್ಕಾರಿ ಭೂಮಿಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.</p>.<p>ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಎಡಿಎಲ್ಆರ್ ಮದನ್, ಉಪತಹಶೀಲ್ದಾರ್ ಮಂಜುನಾಥ್ ಸ್ವಾಮಿ, ರಾಜಸ್ವ ನಿರೀಕ್ಷಕ ಪ್ರಶಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಹುಸ್ಕೂರು ಸಮೀಪದಲ್ಲಿ ಒತ್ತುವರಿಯಾಗಿದ್ದ ಕೆರೆ ಜಾಗವನ್ನು ಜಿಲ್ಲಾಡಳಿತ ಶುಕ್ರವಾರ ತೆರವುಗೊಳಿಸಿ ಅಂದಾಜು ₹90ಲಕ್ಷ ಮೌಲ್ಯದ ಜಾಗವನ್ನು ರಕ್ಷಿಸಿ ವಶಪಡಿಸಿಕೊಂಡಿತು.</p>.<p>ಹುಸ್ಕೂರು ಸರ್ವೆ ನಂ.163ರಲ್ಲಿ 20ಗುಂಟೆ ಕೆರೆಯ ಜಾಗ ಹಲವು ವರ್ಷಗಳಿಂದ ಒತ್ತುವರಿಯಾಗಿತ್ತು. ಜಿಲ್ಲಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ಒತ್ತುವರಿ ತೆರವುಗೊಳಿಸಿದರು.</p>.<p>ಸರ್ಕಾರಿ ಜಾಗಗಳನ್ನು ರಕ್ಷಣೆ ಮಾಡಬೇಕಾದುದ್ದು ಜಿಲ್ಲಾಡಳಿತದ ಗುರಿ. ಈ ನಿಟ್ಟಿನಲ್ಲಿ ಸರ್ಕಾರಿ ಜಾಗಗಳ ಒತ್ತುವರಿ ತೆರವಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಕೆರೆಯ ಜಾಗ ಒತ್ತುವರಿಯನ್ನು ತೆರವುಗೊಳಿಸಿದ್ದರಿಂದ ಜಲಮೂಲ ರಕ್ಷಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲೆಡೆ ಕಂದಾಯ ಇಲಾಖೆಯ ಸಕ್ರಿಯರಾಗಿ ಸರ್ಕಾರಿ ಭೂಮಿಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.</p>.<p>ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಎಡಿಎಲ್ಆರ್ ಮದನ್, ಉಪತಹಶೀಲ್ದಾರ್ ಮಂಜುನಾಥ್ ಸ್ವಾಮಿ, ರಾಜಸ್ವ ನಿರೀಕ್ಷಕ ಪ್ರಶಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>