<p><strong>ವಿಜಯಪುರ(ದೇವನಹಳ್ಳಿ): </strong>ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಪ್ರಗತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಶಾಲಾ ವಿದ್ಯಾರ್ಥಿಗಳು ಹಸಿ ಕಸ, ಒಣ ಕಸ, ಆಸ್ಪತ್ರೆ ತ್ಯಾಜ್ಯ ಮತ್ತು ಇ-ತ್ಯಾಜ್ಯದ ವಿಂಗಡಣೆ, ವಿಲೇವಾರಿ ಕುರಿತು ಪ್ರಾತ್ಯಕ್ಷಿಕೆ ನೀಡಿ ಅರಿವು ಮೂಡಿಸಿದರು. ಬಿತ್ತಿಪತ್ರ ಪ್ರದರ್ಶನದ ಮೂಲಕ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಧು ಮಾತನಾಡಿ, ‘ಹಸಿರೇ ನಮ್ಮ ಉಸಿರಾಗಿದ್ದು, ಮುಂದಿನ ಪೀಳಿಗೆಗಾಗಿ ಸ್ವಚ್ಛ ಸುಂದರ ಪ್ರಕೃತಿಯನ್ನು ಎಲ್ಲರೂ ನಿರ್ಮಿಸಬೇಕಿದೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಅಪಾಯಕಾರಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಗಿಡ-ಮರಗಳನ್ನು ಹುಟ್ಟಿದ ಮಗುವಿನಂತೆ ಪೋಷಿಸಬೇಕು. ಪರಿಸರ ದಿನ ಒಂದೇ ದಿನಕ್ಕೆ ಸೀಮಿತ ಮಾಡದೇ ಪ್ರತಿದಿನ ಪರಿಸರ ದಿನ ಎಂಬಂತೆ ಆಚರಿಸಬೇಕು ಎಂದರು.</p>.<p>ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್, ಪರಿಸರ ಸಂರಕ್ಷಣೆಗಾಗಿ ಪ್ರತಿ ಕುಟುಂಬವು ಪುರಸಭೆಗೆ ಸಹಕಾರ ನೀಡಬೇಕು ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ತಾಜುನ್ನಿಸಾ ಮಹಬೂಬ್ ಪಾಷ, ಸದಸ್ಯೆ ಶಿಲ್ಪಅಜಿತ್, ಪ್ರಗತಿ ಶಾಲೆ ಮುಖ್ಯ ಶಿಕ್ಷಕ ಬಸವರಾಜ್, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ): </strong>ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಪ್ರಗತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಶಾಲಾ ವಿದ್ಯಾರ್ಥಿಗಳು ಹಸಿ ಕಸ, ಒಣ ಕಸ, ಆಸ್ಪತ್ರೆ ತ್ಯಾಜ್ಯ ಮತ್ತು ಇ-ತ್ಯಾಜ್ಯದ ವಿಂಗಡಣೆ, ವಿಲೇವಾರಿ ಕುರಿತು ಪ್ರಾತ್ಯಕ್ಷಿಕೆ ನೀಡಿ ಅರಿವು ಮೂಡಿಸಿದರು. ಬಿತ್ತಿಪತ್ರ ಪ್ರದರ್ಶನದ ಮೂಲಕ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಧು ಮಾತನಾಡಿ, ‘ಹಸಿರೇ ನಮ್ಮ ಉಸಿರಾಗಿದ್ದು, ಮುಂದಿನ ಪೀಳಿಗೆಗಾಗಿ ಸ್ವಚ್ಛ ಸುಂದರ ಪ್ರಕೃತಿಯನ್ನು ಎಲ್ಲರೂ ನಿರ್ಮಿಸಬೇಕಿದೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಹೇಳಿದರು.</p>.<p>ಅಪಾಯಕಾರಿ ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು, ಗಿಡ-ಮರಗಳನ್ನು ಹುಟ್ಟಿದ ಮಗುವಿನಂತೆ ಪೋಷಿಸಬೇಕು. ಪರಿಸರ ದಿನ ಒಂದೇ ದಿನಕ್ಕೆ ಸೀಮಿತ ಮಾಡದೇ ಪ್ರತಿದಿನ ಪರಿಸರ ದಿನ ಎಂಬಂತೆ ಆಚರಿಸಬೇಕು ಎಂದರು.</p>.<p>ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್, ಪರಿಸರ ಸಂರಕ್ಷಣೆಗಾಗಿ ಪ್ರತಿ ಕುಟುಂಬವು ಪುರಸಭೆಗೆ ಸಹಕಾರ ನೀಡಬೇಕು ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ತಾಜುನ್ನಿಸಾ ಮಹಬೂಬ್ ಪಾಷ, ಸದಸ್ಯೆ ಶಿಲ್ಪಅಜಿತ್, ಪ್ರಗತಿ ಶಾಲೆ ಮುಖ್ಯ ಶಿಕ್ಷಕ ಬಸವರಾಜ್, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>