<p><strong>ಸೂಲಿಬೆಲೆ (ಹೂಸಕೋಟೆ):</strong> ಭೂಮಿಯ ತಾಪಮಾನ ದಿನೇ ದಿನೇ ಹೆಚ್ಚಳವಾಗುತ್ತಿದೆ. ಭೂಮಿ ಮೇಲೆ ಜೀವರಾಶಿಗಳು ನಿರಾಳವಾಗಿ ಜೀವಿಸಬೇಕಾದರೆ ನಾವೆಲ್ಲರೂ ಪರಿಸರ ಸಂರಕ್ಷಣೆ ಮಾಡುವುದು ಕರ್ತವ್ಯವೆಂದು ಭಾವಿಸಬೇಕು ಎಂದು ಸೂಲಿಬೆಲೆಯ ಹಿರಿಯ ಮುಖಂಡ ಬಿ.ಎನ್.ಗೋಪಾಲಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಏಕ್ ಪೆಡ್ ಮಾ ಕೆ ನಾಮ್’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ಕಾಳಜಿ ಬೆಳಸಿಕೊಳ್ಳಬೇಕು. ಅಬ್ದುಲ್ ಕಲಾಂರಂತೆ ಸರಳವಾಗಿ ಜೀವಿಸಿ ಎಲ್ಲರೂ ಸಮಾಜದ ಆಸ್ತಿಗಳಾಗಬೇಕು. ಜತೆಗೆ ಸಾಮಾಜಿಕ ಕಾಳಜಿಯುಳ್ಳ ವಿಶ್ವಮಾನವನಾಗಬೇಕು ಎಂದರು.</p>.<p>ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಶಶಿಕಲಾ ಮಾತನಾಡಿ, ಕೇಂದ್ರ ಸರ್ಕಾರದ ಮೇರಾ ಯುವ ಭಾರತ್ ವತಿಯಿಂದ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಅರ್ಪಣಾ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿ ಎಂದರು.</p>.<p>ವಸತಿ ಶಾಲೆಯ ಉಪನ್ಯಾಸಕ ಸೋಮನಾಥ್, ಕೃಷ್ಣ, ಸ್ನೇಹಪೂಜಾರ, ದಿವಾಕರರೆಡ್ಡಿ, ಸರ್ದಾರ್ ಅಹಮದ್, ಮಹೇಶ್, ಆಶಾ, ಶ್ವೇತಾ, ರಮೇಶ್, ಹರೀಶ್, ಶಬ್ಬೀರ್ಅಹಮ್ಮದ್, ಮಾಲಾ, ಸೌಮ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ (ಹೂಸಕೋಟೆ):</strong> ಭೂಮಿಯ ತಾಪಮಾನ ದಿನೇ ದಿನೇ ಹೆಚ್ಚಳವಾಗುತ್ತಿದೆ. ಭೂಮಿ ಮೇಲೆ ಜೀವರಾಶಿಗಳು ನಿರಾಳವಾಗಿ ಜೀವಿಸಬೇಕಾದರೆ ನಾವೆಲ್ಲರೂ ಪರಿಸರ ಸಂರಕ್ಷಣೆ ಮಾಡುವುದು ಕರ್ತವ್ಯವೆಂದು ಭಾವಿಸಬೇಕು ಎಂದು ಸೂಲಿಬೆಲೆಯ ಹಿರಿಯ ಮುಖಂಡ ಬಿ.ಎನ್.ಗೋಪಾಲಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಏಕ್ ಪೆಡ್ ಮಾ ಕೆ ನಾಮ್’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ಕಾಳಜಿ ಬೆಳಸಿಕೊಳ್ಳಬೇಕು. ಅಬ್ದುಲ್ ಕಲಾಂರಂತೆ ಸರಳವಾಗಿ ಜೀವಿಸಿ ಎಲ್ಲರೂ ಸಮಾಜದ ಆಸ್ತಿಗಳಾಗಬೇಕು. ಜತೆಗೆ ಸಾಮಾಜಿಕ ಕಾಳಜಿಯುಳ್ಳ ವಿಶ್ವಮಾನವನಾಗಬೇಕು ಎಂದರು.</p>.<p>ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಶಶಿಕಲಾ ಮಾತನಾಡಿ, ಕೇಂದ್ರ ಸರ್ಕಾರದ ಮೇರಾ ಯುವ ಭಾರತ್ ವತಿಯಿಂದ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಅರ್ಪಣಾ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿ ಎಂದರು.</p>.<p>ವಸತಿ ಶಾಲೆಯ ಉಪನ್ಯಾಸಕ ಸೋಮನಾಥ್, ಕೃಷ್ಣ, ಸ್ನೇಹಪೂಜಾರ, ದಿವಾಕರರೆಡ್ಡಿ, ಸರ್ದಾರ್ ಅಹಮದ್, ಮಹೇಶ್, ಆಶಾ, ಶ್ವೇತಾ, ರಮೇಶ್, ಹರೀಶ್, ಶಬ್ಬೀರ್ಅಹಮ್ಮದ್, ಮಾಲಾ, ಸೌಮ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>