<p><strong>ಹೊಸಕೋಟೆ:</strong> ‘ನಿವೃತ್ತಿ ನಂತರ ಎಲ್ಲರೂ ಸಮಾನರು. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಎಂಬ ತಾರತಮ್ಯ ಸಲ್ಲದು. ಎಲ್ಲರಿಗೂ ಸಮಾನ ನಿವೃತ್ತಿ ವೇತನ ಕಲ್ಪಿಸಬೇಕು’ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಡಿ.ಎನ್.ಸಂಪತ್ ಒತ್ತಾಯಿಸಿದರು.</p>.<p>ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರಿ ನೌಕರರಿಗೆ ಈ ವರ್ಷದ ಜನವರಿ ಒಂದರಿಂದ ಕೊಡುತ್ತಿರುವ ತುಟ್ಟಿಭತ್ಯೆಯಲ್ಲಿನ ವ್ಯತ್ಯಾಸ ಸರಿಪಡಿಸುವಂತೆ, ಪೌರಾಡಳಿತ ಇಲಾಖೆ ನೌಕರರಿಗೂ ವೇತನ ಆಯೋಗದ ಪರಿಷ್ಕೃತ ವೇತನ ಕೊಡುವಂತೆ ಆಗ್ರಹಿಸಿದರು.<br />‘ನಿವೃತ್ತರೆಲ್ಲರೂ ತಪ್ಪದೇ ಸಂಘದ ಸದಸ್ಯರಾಗುವಂತೆ, ಕೇಂದ್ರ ಸಂಘವನ್ನು ಬಲಪಡಿಸುವಂತೆ ಮನವಿ ಮಾಡಿದರು. ಸದ್ಯದಲ್ಲೇ ಕೇಂದ್ರ ಸಂಘದ ಅಮೃತ ಮಹೋತ್ಸವ ನಡೆಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.<br />ತಾಲ್ಲೂಕು ಘಟಕದ ಅಧ್ಯಕ್ಷ ಕೆ.ನಾರಾಯಣಸ್ವಾಮಿ ಇದ್ದರು. ಹಿರಿಯ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ‘ನಿವೃತ್ತಿ ನಂತರ ಎಲ್ಲರೂ ಸಮಾನರು. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಎಂಬ ತಾರತಮ್ಯ ಸಲ್ಲದು. ಎಲ್ಲರಿಗೂ ಸಮಾನ ನಿವೃತ್ತಿ ವೇತನ ಕಲ್ಪಿಸಬೇಕು’ ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಡಿ.ಎನ್.ಸಂಪತ್ ಒತ್ತಾಯಿಸಿದರು.</p>.<p>ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರಿ ನೌಕರರಿಗೆ ಈ ವರ್ಷದ ಜನವರಿ ಒಂದರಿಂದ ಕೊಡುತ್ತಿರುವ ತುಟ್ಟಿಭತ್ಯೆಯಲ್ಲಿನ ವ್ಯತ್ಯಾಸ ಸರಿಪಡಿಸುವಂತೆ, ಪೌರಾಡಳಿತ ಇಲಾಖೆ ನೌಕರರಿಗೂ ವೇತನ ಆಯೋಗದ ಪರಿಷ್ಕೃತ ವೇತನ ಕೊಡುವಂತೆ ಆಗ್ರಹಿಸಿದರು.<br />‘ನಿವೃತ್ತರೆಲ್ಲರೂ ತಪ್ಪದೇ ಸಂಘದ ಸದಸ್ಯರಾಗುವಂತೆ, ಕೇಂದ್ರ ಸಂಘವನ್ನು ಬಲಪಡಿಸುವಂತೆ ಮನವಿ ಮಾಡಿದರು. ಸದ್ಯದಲ್ಲೇ ಕೇಂದ್ರ ಸಂಘದ ಅಮೃತ ಮಹೋತ್ಸವ ನಡೆಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.<br />ತಾಲ್ಲೂಕು ಘಟಕದ ಅಧ್ಯಕ್ಷ ಕೆ.ನಾರಾಯಣಸ್ವಾಮಿ ಇದ್ದರು. ಹಿರಿಯ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>