ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕೆಎಸ್ಆರ್ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಂ.ಬಿ.ಆನಂದ್ ಈ ಬಗ್ಗೆ ಮಾಹಿತಿ ನೀಡಿ, ‘ಎಂ.ಜಿ.ಕೃಷ್ಣಪ್ಪ ಅವರು ಡಿಪೋದಲ್ಲಿನ ನೌಕರರು ಕೆಲಸಕ್ಕೆ ಹಾಜರಾಗದಂತೆ, ಮುಷ್ಕರದಲ್ಲಿ ತೊಡಗಿಕೊಳ್ಳುವಂತೆ ಹೇಳಿದ್ದಾರೆ. ಸಾರ್ವಜನಿಕರು ಸರ್ಕಾರಿ ಬಸ್ನಲ್ಲಿ ಸಂಚರಿಸಿ ಜೀವಕ್ಕೆ ತೊಂದರೆಯಾದರೆ ನಾವು ಕಾರಣರಲ್ಲ ಎಂದು ವಿಡಿಯೊ ಮಾಡಿ ವಾಟ್ಸ್ ಆ್ಯಪ್ನಲ್ಲಿ ಹರಿದು ಬಿಟ್ಟು ಪ್ರಚೋದನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೃಷ್ಣಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು’ ಎಂದರು.