’ಕೊರೊನಾ ಕಾಲದಲ್ಲಿ ತರಕಾರಿ ಮಾರಾಟ, ಎಳೆನೀರು ವ್ಯಾಪಾರ ಸೇರಿದಂತೆ ಎಲ್ಲ ರೀತಿಯ ಕೆಲಸ ಮಾಡಿದ್ದೇನೆ. ಶಾಲೆಯಲ್ಲಿ ಮಕ್ಕಳಿಗೆ ಶುಲ್ಕ ಪಾವತಿಸುವಂತೆ ಕೇಳಲಾಗುತ್ತಿದೆ. ಏನು ಮಾಡಲು ದಿಕ್ಕು ತೋಚದಂತಾಗಿದೆ’ ಎಂದು ಅಳಲು ತೋಡಿಕೊಂಡರು. ಸರ್ಕಾರ ಕಾರ್ಮಿಕರಿಗೆ ನೀಡಿದ ಪರಿಹಾರ ಎಲ್ಲರಿಗೂ ಸಿಗಲಿಲ್ಲ. ಕೆಲವರಿಗೆ ಸಿಕ್ಕರೂ ಅದು ಲಾಕ್ಡೌನ್ ಕಾಲದಲ್ಲೇ ಖರ್ಚಾಯಿತು. ಪರಿಹಾರ ರೂಪದಲ್ಲಿ ಅಲ್ಪಸ್ವಲ್ಪ ಸಹಾಯ ಮಾಡುವುದಕ್ಕಿಂತ ಒಂದು ನಿಗಮ ಸ್ಥಾಪನೆ ಮಾಡಿದರೆ ಅನುಕೂಲವಾಗಲಿದೆ ಎನ್ನುತ್ತಾರೆ ಟ್ಯಾಕ್ಸಿ ಚಾಲಕರಾದ ರಾಮಾಂಜಿ, ಮುನಿಕೃಷ್ಣ.