ಹೊಸಕೋಟೆ: ‘ಅಸಂಘಟಿತ ಅಡುಗೆ ಕಾರ್ಮಿಕರಿಗೆ ಮತ್ತು ಸಹಾಯಕರಿಗೆ ಕೊರೊನಾ ಸಂಕಷ್ಟದ ಸಮಯದಲ್ಲಿ ಬಹಳ ತೊಂದರೆಯಾಗಿದೆ. ಅಂತಹ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯ ಒದಗಿಸುವ ಸಲುವಾಗಿ ಬೆಂಗಳೂರು ಗ್ರಾಮಾಂತರ, ಹೊಸಕೋಟೆ ತಾಲ್ಲೂಕು ಅಸಂಘಟಿತ ಅಡುಗೆ ಕಾರ್ಮಿಕರ ಸೇವಾ ಟ್ರಸ್ಟ್ ಪ್ರಾರಂಭಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ವೈ.ಜೆ. ಮುರಳೀಧರ್ ತಿಳಿಸಿದರು.