<p><strong>ಸೂಲಿಬೆಲೆ: </strong>ವಿದ್ಯಾರ್ಥಿ ಮಾನವೀಯ ಮೌಲ್ಯ ರೂಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಸ್ಕೌಟ್ ಅಂಡ್ ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್ ಹೇಳಿದರು.</p>.<p>ಸೂಲಿಬೆಲೆ ಜನತಾ ಕಾಲೊನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಗೈಡ್ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಸೇವಾ ಮನೋಭಾವ, ಮೌಲ್ಯಗಳು ಮತ್ತು ಸಾಮಾಜಿಕ ಕಳಕಳಿ ಮೂಡಿಸುವ ಉದ್ದೇಶದಿಂದ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಕಬ್ ಮತ್ತು ಬುಲ್ ಬುಲ್ ಎಂಬ ದಳಗಳನ್ನು ಮಾಡಿಕೊಳ್ಳಲಾಗಿದೆ. ಸೇವೆಯೇ ಸ್ಕೌಟ್ನ ಪ್ರಧಾನ ಆಶಯವಾಗಿದೆ’ ಎಂದರು.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅಶ್ವತ್ಥ್ ಮಾತನಾಡಿ, ‘ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದೆ. ನಮ್ಮ ಮನೆ ಮತ್ತು ನಮ್ಮನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮನೋಭಾವ ಮೂಡಿದರೆ ನಾಡು ಮತ್ತು ದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುತ್ತಾರೆ’ ಎಂದರು.</p>.<p>ಮುಖ್ಯ ಶಿಕ್ಷಕ ರಾಮನಗೌಡ, ಗೈಡ್ ಕ್ಯಾಪ್ಟನ್ ಪ್ರಭಾವತಿ, ಶಾಲಾಭಿವೃದ್ಧಿ ಅಧ್ಯಕ್ಷೆ ದೀಪಾ ಶಿವರಾಜ, ಉಪಾಧ್ಯಕ್ಷ ಸಿರಾಜ್, ಸಹ ಶಿಕ್ಷಕರಾದ ಶೈಲಜಾ, ಸನಾವುಲ್ಲಾ, ಗುರುರಾಜ್, ಪದ್ಮಿನಿ ಹಾಗೂ ಗೈಡ್ ಜಿಲ್ಲಾ ಘಟಕದ ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>ವಿದ್ಯಾರ್ಥಿ ಮಾನವೀಯ ಮೌಲ್ಯ ರೂಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಸ್ಕೌಟ್ ಅಂಡ್ ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್ ಹೇಳಿದರು.</p>.<p>ಸೂಲಿಬೆಲೆ ಜನತಾ ಕಾಲೊನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಗೈಡ್ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಸೇವಾ ಮನೋಭಾವ, ಮೌಲ್ಯಗಳು ಮತ್ತು ಸಾಮಾಜಿಕ ಕಳಕಳಿ ಮೂಡಿಸುವ ಉದ್ದೇಶದಿಂದ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಕಬ್ ಮತ್ತು ಬುಲ್ ಬುಲ್ ಎಂಬ ದಳಗಳನ್ನು ಮಾಡಿಕೊಳ್ಳಲಾಗಿದೆ. ಸೇವೆಯೇ ಸ್ಕೌಟ್ನ ಪ್ರಧಾನ ಆಶಯವಾಗಿದೆ’ ಎಂದರು.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅಶ್ವತ್ಥ್ ಮಾತನಾಡಿ, ‘ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದೆ. ನಮ್ಮ ಮನೆ ಮತ್ತು ನಮ್ಮನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮನೋಭಾವ ಮೂಡಿದರೆ ನಾಡು ಮತ್ತು ದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುತ್ತಾರೆ’ ಎಂದರು.</p>.<p>ಮುಖ್ಯ ಶಿಕ್ಷಕ ರಾಮನಗೌಡ, ಗೈಡ್ ಕ್ಯಾಪ್ಟನ್ ಪ್ರಭಾವತಿ, ಶಾಲಾಭಿವೃದ್ಧಿ ಅಧ್ಯಕ್ಷೆ ದೀಪಾ ಶಿವರಾಜ, ಉಪಾಧ್ಯಕ್ಷ ಸಿರಾಜ್, ಸಹ ಶಿಕ್ಷಕರಾದ ಶೈಲಜಾ, ಸನಾವುಲ್ಲಾ, ಗುರುರಾಜ್, ಪದ್ಮಿನಿ ಹಾಗೂ ಗೈಡ್ ಜಿಲ್ಲಾ ಘಟಕದ ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>