ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರು ಬೆಳೆದಿರುವ ತರಕಾರಿ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಒಟ್ಟುಗೂಡಿಸಿ ವಾಹನಗಳ ಮೂಲಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವಮೈದಾನಕ್ಕೆ ಸರಬರಾಜು ಮಾಡಿದರೆ, ನೇರವಾಗಿ ವರ್ತಕರಿಗೆ ಮಾರಾಟ ಮಾಡಲು ಸೂಕ್ತ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.