ನಿಟ್ಟುಸಿರು ಬಿಟ್ಟ ಆಕಾಂಕ್ಷಿಗಳು: ಇತ್ತೀಚೆಗಷ್ಟೇ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಭರ್ಜರಿ ಜಯಗಳಿಸಿತ್ತು. ಹೀಗಾಗಿ ಈ ಫಲಿತಾಂಶ ನಗರಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಆತಂಕದಲ್ಲಿದ್ದರು. ಆದರೆ ಫಲಿತಾಂಶದ ನಂತರ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಲೋಕಸಭಾ ಚುನಾವಣಾ ಫಲಿತಾಂಶ ಯಾವುದೇ ಪರಿಣಾಮ ಬೀರದೆ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಿಂದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮೇಲು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನುವ ಆಶಾಭಾವನೆಯಲ್ಲಿ ಆಕಾಂಕ್ಷಿಗಳು ನಿಟ್ಟುಸಿರು ಬಿಟ್ಟಿದ್ದಾರೆ.