ಆನೇಕಲ್: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಹಲವು ತಿಂಗಳುಗಳಿಂದ ಮುಚ್ಚಿದ್ದವು. ಪ್ರಸ್ತುತ ಹಂತ ಹಂತವಾಗಿ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಕ್ರಮಕೈಗೊಂಡಿದೆ. ಹಾಗಾಗಿ, ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಸಂಘ ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಹುಸ್ಕೂರು ಮದ್ದೂರಮ್ಮ ದೇವಿ ದೇವಾಲಯದ ಟ್ರಸ್ಟ್ನ ಕನ್ವೀನರ್ ಪಾಪಣ್ಣ ತಿಳಿಸಿದರು.