ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಚಂದ್ರಶೇಖರ ಹಡಪದ್ ಮಾತನಾಡಿ, ‘ಕೋವಿಡ್–19 ತುರ್ತು ಸಂದರ್ಭದಲ್ಲಿಯೂ ಶಿಕ್ಷಕರು ತಮ್ಮ ಸೇವೆ ಮುಂದುವರಿಸಿರುವುದರಿಂದ ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ತೊಡೆದು, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿಯೇ ಗುರು. ನಮ್ಮನ್ನು ಗುರುತಿಸಿ ಪುರಸ್ಕಾರ ನೀಡಿರುವುದರಿಂದ ನಮ್ಮ ಹೊಣೆಗಾರಿಕೆ ಮತ್ತಷ್ಟು ಹೆಚ್ಚಾಗಿದೆ. ಗುರುವಿನ ಸ್ಥಾನದಲ್ಲಿ ತಂದೆ-ತಾಯಿಗಳು, ಶಿಕ್ಷಕರು, ಹಿರಿಯರು, ಹಿತೈಷಿಗಳು, ಸ್ನೇಹಿತರು ನಿಲ್ಲುತ್ತಾರೆ. ಸಾಧನೆ ಮಾಡಲು ನಿಶ್ಚಯಿಸಿರುವವನಿಗೆ ಹಿಂದೆ ಗುರು ಮುಂದೆ ಗುರಿ ಇರಬೇಕು. ಗುರುವಿನ ಮಾರ್ಗದರ್ಶನವಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.