<p><strong>ದೇವನಹಳ್ಳಿ: </strong>ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಹಲವಾರು ಕ್ಷೇತ್ರಗಳಲ್ಲಿ ಅಂಗವಿಕಲರ ಪಾತ್ರವು ಇದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಮೀಸಲು ಇರುವ ಅಂಗವಿಕಲರ ಶೇ 5ರಷ್ಟು ಅನುದಾನದಲ್ಲಿ ಅಂಗವಿಕಲರಿಗೆ ನಾಲ್ಕು ಚಕ್ರದ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರಸ್ತುತ ವಿಧಾನಸಭಾ ಕ್ಷೇತ್ರದಲ್ಲಿ 13 ಅರ್ಹ ಅಂಗವಿಕಲರಿಗೆ ವಿತರಿಸಲಾಗುತ್ತಿದ್ದು ಶೇ 75ರಷ್ಟು ವಿಕಲತೆಯ ವೈದ್ಯಕೀಯ ದೃಢೀಕೃತ ಪ್ರಮಾಣಪತ್ರ ಪಡೆದುಕೊಂಡು ಅರ್ಜಿ ಸಲ್ಲಿಸುವವರೆಲ್ಲರೂ ಫಲಾನುಭವಿಗಳಗುತ್ತಾರೆ. ಅಂಗವಿಕಲರು ಸ್ವಾಭಿಮಾನಿಯಾಗಿ ಸ್ವಾವಲಂಬನೆ ಜೀವನ ನಡೆಸಲು ಪ್ರೊತ್ಸಾಹ ನೀಡಬೇಕೇ ಹೊರತು ಅನುಕಂಪವನ್ನು ತೋರಿಸುವುದಲ್ಲ’ ಎಂದರು.</p>.<p>ದೇವನಹಳ್ಳಿ ತಾಲ್ಲೂಕು ಆಡಳಿತ ಕಚೇರಿ ಮೊದಲ ಅಂತಸ್ತಿನಲ್ಲಿರುವ ಉಪನೋಂದಣಿ ಕಚೇರಿಯನ್ನು ನೆಲ ಅಂತಸ್ತಿಗೆ ಸ್ಥಳಾಂತರ ಮಾಡುವಂತೆ ತಹಶೀಲ್ದಾರ್ಗೆ ಸೂಚಿಸಿದ್ದೇನೆ. ಈಗಿರುವ ಕಚೇರಿಯಿಂದ ಅಂಗವಿಕಲರಿಗೆ ಮತ್ತು ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ಅಂಗವಿಕಲರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಸುರೇಶ್ ಅಯ್ಯರ್ ಮಾತನಾಡಿ, ‘ಶಾಸಕರ ಅನುದಾನದಿಂದ ಕಳೆದ ಎರಡು ವರ್ಷಗಳಿಂದ ಅನೇಕ ಅಂಗವಿಕಲರಿಗೆ ಹಲವಾರು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ’ ಎಂದು ಹೇಳಿದರು .<br />ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಎ.ಪಿ.ಎಂ.ಸಿ.ಎಸ್ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರವೀಂದ್ರ, ಜೆಡಿಎಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ಪುರಸಭೆ ಸದಸ್ಯ ಎಸ್.ನಾಗೇಶ್, ಮುಖಂಡ ಎಸ್.ಎಲ್.ಎನ್ ಮುನಿರಾಜು, ಎಂ.ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಹಲವಾರು ಕ್ಷೇತ್ರಗಳಲ್ಲಿ ಅಂಗವಿಕಲರ ಪಾತ್ರವು ಇದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಮೀಸಲು ಇರುವ ಅಂಗವಿಕಲರ ಶೇ 5ರಷ್ಟು ಅನುದಾನದಲ್ಲಿ ಅಂಗವಿಕಲರಿಗೆ ನಾಲ್ಕು ಚಕ್ರದ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರಸ್ತುತ ವಿಧಾನಸಭಾ ಕ್ಷೇತ್ರದಲ್ಲಿ 13 ಅರ್ಹ ಅಂಗವಿಕಲರಿಗೆ ವಿತರಿಸಲಾಗುತ್ತಿದ್ದು ಶೇ 75ರಷ್ಟು ವಿಕಲತೆಯ ವೈದ್ಯಕೀಯ ದೃಢೀಕೃತ ಪ್ರಮಾಣಪತ್ರ ಪಡೆದುಕೊಂಡು ಅರ್ಜಿ ಸಲ್ಲಿಸುವವರೆಲ್ಲರೂ ಫಲಾನುಭವಿಗಳಗುತ್ತಾರೆ. ಅಂಗವಿಕಲರು ಸ್ವಾಭಿಮಾನಿಯಾಗಿ ಸ್ವಾವಲಂಬನೆ ಜೀವನ ನಡೆಸಲು ಪ್ರೊತ್ಸಾಹ ನೀಡಬೇಕೇ ಹೊರತು ಅನುಕಂಪವನ್ನು ತೋರಿಸುವುದಲ್ಲ’ ಎಂದರು.</p>.<p>ದೇವನಹಳ್ಳಿ ತಾಲ್ಲೂಕು ಆಡಳಿತ ಕಚೇರಿ ಮೊದಲ ಅಂತಸ್ತಿನಲ್ಲಿರುವ ಉಪನೋಂದಣಿ ಕಚೇರಿಯನ್ನು ನೆಲ ಅಂತಸ್ತಿಗೆ ಸ್ಥಳಾಂತರ ಮಾಡುವಂತೆ ತಹಶೀಲ್ದಾರ್ಗೆ ಸೂಚಿಸಿದ್ದೇನೆ. ಈಗಿರುವ ಕಚೇರಿಯಿಂದ ಅಂಗವಿಕಲರಿಗೆ ಮತ್ತು ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ಅಂಗವಿಕಲರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಸುರೇಶ್ ಅಯ್ಯರ್ ಮಾತನಾಡಿ, ‘ಶಾಸಕರ ಅನುದಾನದಿಂದ ಕಳೆದ ಎರಡು ವರ್ಷಗಳಿಂದ ಅನೇಕ ಅಂಗವಿಕಲರಿಗೆ ಹಲವಾರು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ’ ಎಂದು ಹೇಳಿದರು .<br />ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಎ.ಪಿ.ಎಂ.ಸಿ.ಎಸ್ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರವೀಂದ್ರ, ಜೆಡಿಎಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ಪುರಸಭೆ ಸದಸ್ಯ ಎಸ್.ನಾಗೇಶ್, ಮುಖಂಡ ಎಸ್.ಎಲ್.ಎನ್ ಮುನಿರಾಜು, ಎಂ.ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>