ಅಂಗವಿಕಲರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಸುರೇಶ್ ಅಯ್ಯರ್ ಮಾತನಾಡಿ, ‘ಶಾಸಕರ ಅನುದಾನದಿಂದ ಕಳೆದ ಎರಡು ವರ್ಷಗಳಿಂದ ಅನೇಕ ಅಂಗವಿಕಲರಿಗೆ ಹಲವಾರು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ’ ಎಂದು ಹೇಳಿದರು .
ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಎ.ಪಿ.ಎಂ.ಸಿ.ಎಸ್ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರವೀಂದ್ರ, ಜೆಡಿಎಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ಪುರಸಭೆ ಸದಸ್ಯ ಎಸ್.ನಾಗೇಶ್, ಮುಖಂಡ ಎಸ್.ಎಲ್.ಎನ್ ಮುನಿರಾಜು, ಎಂ.ಕುಮಾರ್ ಇದ್ದರು.