<p><strong>ದೊಡ್ಡಬಳ್ಳಾಪುರ</strong>: ನಗರದ ಅಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. </p>.<p>ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಎಂದು ಅಂದಾಜಿಸಲಾಗಿದೆ.</p>.<p>ಗ್ರಾಮದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು.</p>.<p>ಅವರ ಹಪಣಿ ವಜಾಗೊಳಿಸುವ ಮೂಲಕ ಸರ್ಕಾರದ ಜಮೀನನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.</p>.<p>ಈ ಕುರಿತು ಅವರು ಸೆಪ್ಟೆಂಬರ್ 2 ರಂದು ಆದೇಶ ಹೊರಡಿಸಿದ್ದಾರೆ. </p>.<p>ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.</p>.<p>ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿರುವಂತೆ, ಗೋಮಾಳ ಜಮೀನು ಕಬಳಿಸುವ ಷಡ್ಯಂತ್ರದಲ್ಲಿ ತಾಲ್ಲೂಕು ಕಚೇರಿಯ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿ ದಾಖಲೆಗಳನ್ನು ಪರಿಶೀಲಿಸದೆ ಆದೇಶ ಮಾಡುವ ಮೂಲಕ ಕೋಟ್ಯoತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ. </p>.<p>ನಕಲಿ ದಾಖಲೆ ಸೃಷ್ಟಿಸಿದ ಈ ಜಮೀನಿನಲ್ಲಿ 1998 ರಿಂದಲೂ ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಈ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ಉಲ್ಲೇಖಿಸಿದ್ದಾರೆ. </p>.<p>ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ರ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ನಗರದ ಅಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. </p>.<p>ವಶಕ್ಕೆ ಪಡೆದಿರುವ ಜಮೀನಿನ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು ₹40 ಕೋಟಿ ಎಂದು ಅಂದಾಜಿಸಲಾಗಿದೆ.</p>.<p>ಗ್ರಾಮದ ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು.</p>.<p>ಅವರ ಹಪಣಿ ವಜಾಗೊಳಿಸುವ ಮೂಲಕ ಸರ್ಕಾರದ ಜಮೀನನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.</p>.<p>ಈ ಕುರಿತು ಅವರು ಸೆಪ್ಟೆಂಬರ್ 2 ರಂದು ಆದೇಶ ಹೊರಡಿಸಿದ್ದಾರೆ. </p>.<p>ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.</p>.<p>ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿರುವಂತೆ, ಗೋಮಾಳ ಜಮೀನು ಕಬಳಿಸುವ ಷಡ್ಯಂತ್ರದಲ್ಲಿ ತಾಲ್ಲೂಕು ಕಚೇರಿಯ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿ ದಾಖಲೆಗಳನ್ನು ಪರಿಶೀಲಿಸದೆ ಆದೇಶ ಮಾಡುವ ಮೂಲಕ ಕೋಟ್ಯoತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ ಎಂದು ವಿವರಿಸಿದ್ದಾರೆ. </p>.<p>ನಕಲಿ ದಾಖಲೆ ಸೃಷ್ಟಿಸಿದ ಈ ಜಮೀನಿನಲ್ಲಿ 1998 ರಿಂದಲೂ ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರವರೆಗೂ ಈ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯದೆ ಇರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ಉಲ್ಲೇಖಿಸಿದ್ದಾರೆ. </p>.<p>ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೆ ನಂಬರ್ 57ರ ಗೋಮಾಳ ಜಮೀನು ಕಬಳಿಕೆ ವಿರುದ್ಧ ಹಲವು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>