ವೆಂಕಟಗಿರಿಕೋಟೆಯಲ್ಲಿ ಮಳೆ ನೀರು ಚರಂಡಿಗಳಲ್ಲಿ ಹರಿಯದೆ ರಸ್ತೆಯಲ್ಲಿ ಹರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವೆಂಕಟೇನಹಳ್ಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದು ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಹರಳೂರು ನಾಗೇನಹಳ್ಳಿಯಲ್ಲಿ ರೇಷ್ಮೆ ಚಂದ್ರಿಕೆ ಶೆಡ್ನ ಶೀಟ್ಗಳು ಗಾಳಿಗೆ ಹಾರಿಹೋಗಿವೆ. ಮನೆ ಹೆಂಚು, ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿವೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕಲ್ಯಾಣ್ಕುಮಾರ್ ಬಾಬು ತಿಳಿಸಿದ್ದಾರೆ.