<p><strong>ತಬರನತೋಟ (ದೊಡ್ಡಬಳ್ಳಾಪುರ): </strong>ತಾಲ್ಲೂಕಿನ ಮಧುರನ ಹೊಸಹಳ್ಳಿಯ ತಬರನತೋಟದಲ್ಲಿ ಹಿರಿಯ ರೈತ ಹೋರಾಟಗಾರ ಡಾ.ಎನ್.ವೆಂಕಟರೆಡ್ಡಿ ಅವರ 14ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.</p>.<p>ಸಭೆಯಲ್ಲಿ ರೈತ ಸಂಘ, ಸಿಪಿಎಂ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ವೆಂಕಟರೆಡ್ಡಿ ಅವರ ಹೋರಾಟದ ಮೆಲುಕು ಹಾಕಿದರು.</p>.<p>ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲೂ ಫಲವತ್ತಾದ ಕೃಷಿ ಭೂಮಿಯನ್ನು ಸರ್ಕಾರ ದೋಚುತ್ತಿದೆ. ಈ ದಬ್ಬಾಳಿಕೆಯ ವಿರುದ್ಧ ರೈತರು ಸಂಘಟಿತ ಹೋರಾಟಕ್ಕೆ ಸಜ್ಜಾಗಬೇಕಿದೆ. ಬೆಂಗಳೂರು ಬಕಾಸೂರನಂತೆ ಗ್ರಾಮಾಂತರ ಜಿಲ್ಲೆಯ ಜನರ ಬದುಕು ನುಂಗುತ್ತಿದೆ. ಅನ್ನದಾತನ ಅಸ್ತಿತ್ವಕ್ಕಾಗಿ ಹೋರಾಟ ಅನಿವಾರ್ಯ ಎಂದು ದಲಿತ ಸಂಘಟನೆಯ ಕಾರಹಳ್ಳಿಶ್ರೀನಿವಾಸ್ ಹೇಳಿದರು.</p>.<p>ರೈತ, ದಲಿತ ಹಾಗೂ ಕನ್ನಡಪರ ಸಂಘಟನೆಗಳನ್ನು ಸಂಘಟಿಸಿದ ವೆಂಕಟರೆಡ್ಡಿ ಅವರ ಹೋರಾಟದ ಬದುಕು ಎಲ್ಲಾ ಚಳವಳಿಗೆ ಚೈತನ್ಯವಾಗಿದೆ. ಪ್ರೊ.ಎಂ.ಡಿ.ನಂಜುಂಡಸ್ವಾಮಿ ನಂತರ ರಾಜ್ಯ ರೈತ ಸಂಘವನ್ನು ಮುನ್ನಡೆಸಿ ಹಲವಾರು ಹೋರಾಟ ರೂಪಿಸಿದ್ದ ವೆಂಕಟರೆಡ್ಡಿ ಹಲವಾರು ಹೋರಾಟಗಾರರನ್ನು ಹುಟ್ಟುಹಾಕಿದ್ದಾರೆ ಎಂದರು.</p>.<p>ಸಿಪಿಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯ್ಕ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಕೆ.ಸುಲೋಚನಮ್ಮ, ಡಿ.ಪಿ.ಅಂಜನೇಯ, ಮುತ್ತೇಗೌಡ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಬರನತೋಟ (ದೊಡ್ಡಬಳ್ಳಾಪುರ): </strong>ತಾಲ್ಲೂಕಿನ ಮಧುರನ ಹೊಸಹಳ್ಳಿಯ ತಬರನತೋಟದಲ್ಲಿ ಹಿರಿಯ ರೈತ ಹೋರಾಟಗಾರ ಡಾ.ಎನ್.ವೆಂಕಟರೆಡ್ಡಿ ಅವರ 14ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.</p>.<p>ಸಭೆಯಲ್ಲಿ ರೈತ ಸಂಘ, ಸಿಪಿಎಂ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ವೆಂಕಟರೆಡ್ಡಿ ಅವರ ಹೋರಾಟದ ಮೆಲುಕು ಹಾಕಿದರು.</p>.<p>ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲೂ ಫಲವತ್ತಾದ ಕೃಷಿ ಭೂಮಿಯನ್ನು ಸರ್ಕಾರ ದೋಚುತ್ತಿದೆ. ಈ ದಬ್ಬಾಳಿಕೆಯ ವಿರುದ್ಧ ರೈತರು ಸಂಘಟಿತ ಹೋರಾಟಕ್ಕೆ ಸಜ್ಜಾಗಬೇಕಿದೆ. ಬೆಂಗಳೂರು ಬಕಾಸೂರನಂತೆ ಗ್ರಾಮಾಂತರ ಜಿಲ್ಲೆಯ ಜನರ ಬದುಕು ನುಂಗುತ್ತಿದೆ. ಅನ್ನದಾತನ ಅಸ್ತಿತ್ವಕ್ಕಾಗಿ ಹೋರಾಟ ಅನಿವಾರ್ಯ ಎಂದು ದಲಿತ ಸಂಘಟನೆಯ ಕಾರಹಳ್ಳಿಶ್ರೀನಿವಾಸ್ ಹೇಳಿದರು.</p>.<p>ರೈತ, ದಲಿತ ಹಾಗೂ ಕನ್ನಡಪರ ಸಂಘಟನೆಗಳನ್ನು ಸಂಘಟಿಸಿದ ವೆಂಕಟರೆಡ್ಡಿ ಅವರ ಹೋರಾಟದ ಬದುಕು ಎಲ್ಲಾ ಚಳವಳಿಗೆ ಚೈತನ್ಯವಾಗಿದೆ. ಪ್ರೊ.ಎಂ.ಡಿ.ನಂಜುಂಡಸ್ವಾಮಿ ನಂತರ ರಾಜ್ಯ ರೈತ ಸಂಘವನ್ನು ಮುನ್ನಡೆಸಿ ಹಲವಾರು ಹೋರಾಟ ರೂಪಿಸಿದ್ದ ವೆಂಕಟರೆಡ್ಡಿ ಹಲವಾರು ಹೋರಾಟಗಾರರನ್ನು ಹುಟ್ಟುಹಾಕಿದ್ದಾರೆ ಎಂದರು.</p>.<p>ಸಿಪಿಎಂ ಜಿಲ್ಲಾ ಮುಖಂಡ ಆರ್.ಚಂದ್ರತೇಜಸ್ವಿ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯ್ಕ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಕೆ.ಸುಲೋಚನಮ್ಮ, ಡಿ.ಪಿ.ಅಂಜನೇಯ, ಮುತ್ತೇಗೌಡ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>