ನೀರಿನ ಕೊರತೆಯ ನಡುವೆಯೂ ಬೇಸಿಗೆಯಲ್ಲಿ ಉತ್ತಮ ಬೆಳೆ ಬೆಳೆದು ಲಾಭ ಗಳಿಸುವ ಭರವಸೆಯಲ್ಲಿದ್ದ ರೈತರಿಗೆ ಕೊರೊನಾ ಸಿಡಿಲಿನಂತೆ ಬಂದೆರೆಗಿದೆ. ಆನೇಕಲ್ ತಾಲ್ಲೂಕಿನ ಮಾಯಸಂದ್ರ, ಕಂಬಳಿಪುರ, ಕೊಡಲಿಪುರ, ಮೇಡಹಳ್ಳಿ, ಹಳೇಹಳ್ಳಿ, ಕರ್ಪೂರು ಸೇರಿದಂತೆ ವಿವಿಧೆಡೆ ಸಾವಯವ ಕೃಷಿಯ ಮೂಲಕ ತರಕಾರಿ ಬೆಳೆಗಳನ್ನು ಬೆಳೆದು ಸಹಜ ಸಾವಯವ ತರಕಾರಿ ಬೆಳೆಗಾರರ ಸಂಘದ ಮೂಲಕ ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಆದರೆ ಕಳೆದ 20 ದಿನಗಳಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.