<p><strong>ಕನಕಪುರ</strong>: ಹೈನುಗಾರಿಕೆ ರೈತರ ಉತ್ತೇಜನಕ್ಕಾಗಿ ಸರ್ಕಾರ ನೀಡುತ್ತಿರುವ ಪ್ರತಿ ಲೀಟರ್ಗೆ ₹5 ಕಳೆದ 10 ತಿಂಗಳಿನಿಂದ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಕಾಡಳ್ಳಿ ಅನುಕುಮಾರ್ ಆರೋಪಿಸಿದರು.</p>.<p>ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಭಾನುವಾರ ನಡೆಸಿದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.</p>.<p>ಹಿಂದಿನ ಸರ್ಕಾರ ಸಮಯಕ್ಕೆ ಸರಿಯಾಗಿ ಹೈನುಗಾರಿಕೆ ರೈತರಿಗೆ ಪ್ರೋತ್ಸಾಹ ಧನ ಬರುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 10 ತಿಂಗಳಿನಿಂದ ಪ್ರೋತ್ಸಾಹ ಧನ ನೀಡಿಲ್ಲ ಎಂದು ದೂರಿದರು.</p>.<p>ಪಶುಗಳ ಆಹಾರದ ಬೆಲೆ ದುಬಾರಿಯಾಗಿದೆ. ಬೇಸಿಗೆ ಕಾರಣದಿಂದ ಹಾಲಿನ ಪ್ರಮಾಣ ಕಡಿಮೆ ಆಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ₹5 ಪ್ರೋತ್ಸಾಹಧನ ರೈತರ ಕೈ ಹಿಡಿಯುತ್ತಿತ್ತು. ಈಗ ಸರ್ಕಾರ 10ತಿಂಗಳಿನಿಂದ ಹಣ ಹಾಕದಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಗುರಿ ಮಾಡಿದೆ ಎಂದು ಹೇಳಿದರು.</p>.<p>ಸರ್ಕಾರಕ್ಕೆ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಕೂಡಲೇ ತಾನು ಬಾಕಿ ಉಳಿಸಿಕೊಂಡಿರುವ ಹಣ ಶೀಘ್ರವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಶಿವಗೂಳಿಗೌಡ, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಕೃಷ್ಣಪ್ಪ, ಅಂತೋನಿ, ರಾಘವೇಂದ್ರ, ಮಂಜುನಾಥ್, ಸತೀಶ್, ಚಿಕ್ಕಣ್ಣ, ಮಹದೇವಣ್ಣ, ರಾಮಣ್ಣ, ಸ್ವಾಮಿಗೌಡ, ಹಲಗೂರು ಚಿಕ್ಕಣ್ಣ, ವೆಂಕಟೇಶ, ನಿಂಗರಾಜು, ಪುಟ್ಟರಂಗಣ್ಣ, ಚನ್ನಪ್ಪ, ಹಳ್ಳಪ್ಪ, ನವೀನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಹೈನುಗಾರಿಕೆ ರೈತರ ಉತ್ತೇಜನಕ್ಕಾಗಿ ಸರ್ಕಾರ ನೀಡುತ್ತಿರುವ ಪ್ರತಿ ಲೀಟರ್ಗೆ ₹5 ಕಳೆದ 10 ತಿಂಗಳಿನಿಂದ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಕಾಡಳ್ಳಿ ಅನುಕುಮಾರ್ ಆರೋಪಿಸಿದರು.</p>.<p>ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಭಾನುವಾರ ನಡೆಸಿದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.</p>.<p>ಹಿಂದಿನ ಸರ್ಕಾರ ಸಮಯಕ್ಕೆ ಸರಿಯಾಗಿ ಹೈನುಗಾರಿಕೆ ರೈತರಿಗೆ ಪ್ರೋತ್ಸಾಹ ಧನ ಬರುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 10 ತಿಂಗಳಿನಿಂದ ಪ್ರೋತ್ಸಾಹ ಧನ ನೀಡಿಲ್ಲ ಎಂದು ದೂರಿದರು.</p>.<p>ಪಶುಗಳ ಆಹಾರದ ಬೆಲೆ ದುಬಾರಿಯಾಗಿದೆ. ಬೇಸಿಗೆ ಕಾರಣದಿಂದ ಹಾಲಿನ ಪ್ರಮಾಣ ಕಡಿಮೆ ಆಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ₹5 ಪ್ರೋತ್ಸಾಹಧನ ರೈತರ ಕೈ ಹಿಡಿಯುತ್ತಿತ್ತು. ಈಗ ಸರ್ಕಾರ 10ತಿಂಗಳಿನಿಂದ ಹಣ ಹಾಕದಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಗುರಿ ಮಾಡಿದೆ ಎಂದು ಹೇಳಿದರು.</p>.<p>ಸರ್ಕಾರಕ್ಕೆ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಕೂಡಲೇ ತಾನು ಬಾಕಿ ಉಳಿಸಿಕೊಂಡಿರುವ ಹಣ ಶೀಘ್ರವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಶಿವಗೂಳಿಗೌಡ, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಕೃಷ್ಣಪ್ಪ, ಅಂತೋನಿ, ರಾಘವೇಂದ್ರ, ಮಂಜುನಾಥ್, ಸತೀಶ್, ಚಿಕ್ಕಣ್ಣ, ಮಹದೇವಣ್ಣ, ರಾಮಣ್ಣ, ಸ್ವಾಮಿಗೌಡ, ಹಲಗೂರು ಚಿಕ್ಕಣ್ಣ, ವೆಂಕಟೇಶ, ನಿಂಗರಾಜು, ಪುಟ್ಟರಂಗಣ್ಣ, ಚನ್ನಪ್ಪ, ಹಳ್ಳಪ್ಪ, ನವೀನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>