ವಿಜಯಪುರ: ಬರ ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರು ಹಣ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ರೈತರು ಬೆಳೆದಿದ್ದ ಮಳೆಯಾಶ್ರಿತ ಬೆಳೆಗಳಾದ ರಾಗಿ, ಮುಸುಕಿನ ಜೋಳ, ಅವರೆ, ನೆಲಗಡಲೆ, ತೊಗರಿ ಹುರುಳಿ ಸೇರಿದಂತೆ ಬಹುತೇಕ ಬೆಳೆಗಳು ಕೈಕೊಟ್ಟಿವೆ. ಇದರಿಂದಾಗಿ ಸಂಪೂರ್ಣವಾಗಿ ನಷ್ಟ ಅನುಭವಿಸಿದ್ದಾರೆ ರೈತ ನಂಜುಂಡಪ್ಪ ಆತಂಕ ವ್ಯಕ್ತಪಡಿಸಿದರು.