ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ, ಈಗಾಗಲೇ ಪುರಸಭೆಯಿಂದ ದಿನಸಿ ಅಂಗಡಿ, ತರಕಾರಿ ಅಂಗಡಿ ಹಾಗೂ ಹೋಟಲ್ಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸದಂತೆ ಸೂಚಿಸಲಾಗಿದೆ. ಫಾಸ್ಟ್ಫುಡ್, ಕಲ್ಯಾಣ ಮಂಟಪಗಳ ಮೇಲೂ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಸದಂತೆ ನಿರ್ದೇಶಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.