<p><strong>ದೇವನಹಳ್ಳಿ</strong>: ತಾಲ್ಲೂಕಿನಾದ್ಯಂತ ಕಳೆದ ವಾರದಿಂದ ಮಳೆಯಾಗುತ್ತಿದ್ದು, ಬಿತ್ತನೆಗೆ ಅಗತ್ಯ ರಸಗೊಬ್ಬರದ ಸಿಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರಿ ಸೌಮ್ಯದ ಸಹಕಾರಿ ಸಂಘಗಳಲ್ಲಿ ರಸಗೊಬ್ಬರಗಳು ಲಭ್ಯವಾಗುತ್ತಿಲ್ಲ ದಾಸ್ತಾನು ಇಲ್ಲ ಎಂಬ ಆರೋಪ ಕೇಳಿ ಬಂದಿದೆ.</p>.<p>ಈ ಬಾರಿ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ವಾಡಿಕೆಯಂತೆ ಆಗಿಲ್ಲ. ಕಳೆದ ಒಂದು ವಾರದಿಂದ ಮಾತ್ರ ಮಳೆ ಸುರಿಯುತ್ತಿದ್ದು, ರೈತರು ಬಿತ್ತನೆಗೆ ಅಣಿಯಾಗಿದ್ದಾರೆ. ಆದರೆ ರಸಗೊಬ್ಬರ ದೊರೆಯದೆ ಇರುವುದರಿಂದ ಬಿತ್ತನೆಗೆ ಅಡ್ಡಿಯಾಗಿದೆ.</p>.<p>‘ಚನ್ನರಾಯಪಟ್ಟಣ ಹೋಬಳಿಗೆ ಕನಿಷ್ಠ 400 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ, ಈ ವರೆಗೂ 40 ಮೆಟ್ರಿಕ್ ಟನ್ ಸಹ ಪೂರೈಕೆ ಆಗಿಲ್ಲ. ಅಗ್ಗದ ದರದಲ್ಲಿ ರಸಗೊಬ್ಬರವನ್ನು ಪಡೆದುಕೊಳ್ಳಲು ರೈತರು ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಯಲಿಯೂರು ಗ್ರಾಮದ ರೈತ ಭಾಗ್ಯವಂತ ದೂರಿದರು.</p>.<p>ಅಧಿಕಾರಿಗಳು ಡಿಎಪಿಗೆ ಬದಲಾಗಿ ಕಾಂಪ್ಲೆಕ್ಸ್ ಗೊಬ್ಬರ ಬಳಸುವಂತೆ ಸೂಚಿಸುತ್ತಾರೆ. ಆದರೆ ರೈತರು ಡಿಎಪಿಗೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಡಿಎಪಿ ಪೂರೈಕೆ ಹೆಚ್ಚಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಮುಖಂಡ ರೈತ ಮಂಜುನಾಥ್ ಒತ್ತಾಯಿಸಿದ್ದಾರೆ.</p>.<p>ಕಸಬಾ ಹೋಬಳಿಯಲ್ಲಿ ಕೃಷಿ ಜಮೀನು ಬಹುತೇಕ ಕೃಷಿಯೇತರ ವಸತಿ ಉಪಯೋಗಕ್ಕೆ ಬದಲಾಗಿದ್ದು, ಕೃಷಿ ಮಾಡುವವರ ಸಂಖ್ಯೆಯೂ ಕ್ಷಿಣಿಸುತ್ತಿದೆ. ಚನ್ನರಾಯಪಟ್ಟಣ, ವಿಜಯಪುರ, ಕುಂದಾಣ ಹೋಬಳಿಗಳಲ್ಲಿ ಮಾತ್ರವೇ ಕೃಷಿ ಚಟುವಟಿಕೆಗಳು ಕಂಡು ಬರುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನಾದ್ಯಂತ ಕಳೆದ ವಾರದಿಂದ ಮಳೆಯಾಗುತ್ತಿದ್ದು, ಬಿತ್ತನೆಗೆ ಅಗತ್ಯ ರಸಗೊಬ್ಬರದ ಸಿಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರಿ ಸೌಮ್ಯದ ಸಹಕಾರಿ ಸಂಘಗಳಲ್ಲಿ ರಸಗೊಬ್ಬರಗಳು ಲಭ್ಯವಾಗುತ್ತಿಲ್ಲ ದಾಸ್ತಾನು ಇಲ್ಲ ಎಂಬ ಆರೋಪ ಕೇಳಿ ಬಂದಿದೆ.</p>.<p>ಈ ಬಾರಿ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ವಾಡಿಕೆಯಂತೆ ಆಗಿಲ್ಲ. ಕಳೆದ ಒಂದು ವಾರದಿಂದ ಮಾತ್ರ ಮಳೆ ಸುರಿಯುತ್ತಿದ್ದು, ರೈತರು ಬಿತ್ತನೆಗೆ ಅಣಿಯಾಗಿದ್ದಾರೆ. ಆದರೆ ರಸಗೊಬ್ಬರ ದೊರೆಯದೆ ಇರುವುದರಿಂದ ಬಿತ್ತನೆಗೆ ಅಡ್ಡಿಯಾಗಿದೆ.</p>.<p>‘ಚನ್ನರಾಯಪಟ್ಟಣ ಹೋಬಳಿಗೆ ಕನಿಷ್ಠ 400 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ, ಈ ವರೆಗೂ 40 ಮೆಟ್ರಿಕ್ ಟನ್ ಸಹ ಪೂರೈಕೆ ಆಗಿಲ್ಲ. ಅಗ್ಗದ ದರದಲ್ಲಿ ರಸಗೊಬ್ಬರವನ್ನು ಪಡೆದುಕೊಳ್ಳಲು ರೈತರು ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಯಲಿಯೂರು ಗ್ರಾಮದ ರೈತ ಭಾಗ್ಯವಂತ ದೂರಿದರು.</p>.<p>ಅಧಿಕಾರಿಗಳು ಡಿಎಪಿಗೆ ಬದಲಾಗಿ ಕಾಂಪ್ಲೆಕ್ಸ್ ಗೊಬ್ಬರ ಬಳಸುವಂತೆ ಸೂಚಿಸುತ್ತಾರೆ. ಆದರೆ ರೈತರು ಡಿಎಪಿಗೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಡಿಎಪಿ ಪೂರೈಕೆ ಹೆಚ್ಚಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಮುಖಂಡ ರೈತ ಮಂಜುನಾಥ್ ಒತ್ತಾಯಿಸಿದ್ದಾರೆ.</p>.<p>ಕಸಬಾ ಹೋಬಳಿಯಲ್ಲಿ ಕೃಷಿ ಜಮೀನು ಬಹುತೇಕ ಕೃಷಿಯೇತರ ವಸತಿ ಉಪಯೋಗಕ್ಕೆ ಬದಲಾಗಿದ್ದು, ಕೃಷಿ ಮಾಡುವವರ ಸಂಖ್ಯೆಯೂ ಕ್ಷಿಣಿಸುತ್ತಿದೆ. ಚನ್ನರಾಯಪಟ್ಟಣ, ವಿಜಯಪುರ, ಕುಂದಾಣ ಹೋಬಳಿಗಳಲ್ಲಿ ಮಾತ್ರವೇ ಕೃಷಿ ಚಟುವಟಿಕೆಗಳು ಕಂಡು ಬರುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>