ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ತಡರಾತ್ರಿವರೆಗೂ ಕಡತ ಪರಿಶೀಲನೆ

Published 21 ಜನವರಿ 2024, 7:34 IST
Last Updated 21 ಜನವರಿ 2024, 7:34 IST
ಅಕ್ಷರ ಗಾತ್ರ

ಹೊಸಕೋಟೆ: ನಗರದ ತಾಲ್ಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ ಲೋಕಾಯುಕ್ತ ಎಸ್.ಪಿ ಬಿ.ಕೆ.ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ಮಾಡಿದರು.

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ತಡರಾತ್ರಿಯವರೆಗೂ ಕಡತ ಪರಿಶೀಲನೆ ನಡೆಸಿದರು.

ಜಿಲ್ಲಾಡಳಿತ ಕೇಂದ್ರದಲ್ಲಿ ಕಂದಾಯ ಇಲಾಖೆ ಕ್ಯಾಲೇಂಡರ್ ಬಿಡುಗಡೆ ಸಮಾರಂಭವಿದ್ದ ಕಾರಣ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಲೋಕಾಯುಕ್ತ ದಾಳಿಯ ನಂತರ ಅಧಿಕಾರಿಗಳನ್ನು ಕರೆಸಿಕೊಂಡು ಕಡತ ತಪಾಸಣೆ ಮುಂದುವರಿಸಿದರು.

ಡಿವೈಎಸ್ಪಿ ಸೂರ್ಯನಾರಾಯಣ್ ರಾವ್, ಇನ್ಸ್ಪೆಕ್ಟರ್‌ಗಳಾದ ಯಶವಂತ್ ಕುಮಾರ್, ಕೆ.ಎಸ್.ಆಂಜಿನಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT