ಹೊಸಕೋಟೆ: ನಗರದ ತಾಲ್ಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ ಲೋಕಾಯುಕ್ತ ಎಸ್.ಪಿ ಬಿ.ಕೆ.ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ಮಾಡಿದರು.
ಶನಿವಾರ ಮಧ್ಯಾಹ್ನ 12 ಗಂಟೆಯಿಂದ ತಡರಾತ್ರಿಯವರೆಗೂ ಕಡತ ಪರಿಶೀಲನೆ ನಡೆಸಿದರು.
ಜಿಲ್ಲಾಡಳಿತ ಕೇಂದ್ರದಲ್ಲಿ ಕಂದಾಯ ಇಲಾಖೆ ಕ್ಯಾಲೇಂಡರ್ ಬಿಡುಗಡೆ ಸಮಾರಂಭವಿದ್ದ ಕಾರಣ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಲೋಕಾಯುಕ್ತ ದಾಳಿಯ ನಂತರ ಅಧಿಕಾರಿಗಳನ್ನು ಕರೆಸಿಕೊಂಡು ಕಡತ ತಪಾಸಣೆ ಮುಂದುವರಿಸಿದರು.