ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್‌ ನಿಲ್ದಾಣ ಭರ್ತಿ

ಪ್ರಯಾಣಿಕರಿಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಖಾಲಿ
Last Updated 13 ಏಪ್ರಿಲ್ 2021, 3:29 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಸೋಮವಾರವು ಸಹ ಬಸ್‌ ಸಂಚಾರ ಸಂಪೂರ್ಣವಾಗಿ ಆರಂಭವಾಗಿಲ್ಲ.

ಇವುಗಳ ಜೊತೆಗೆ ಪ್ರಯಾಣಿಕರು ಯುಗಾದಿ ಹಬ್ಬದ ಕಾರಣ ದೂರದ ಊರುಗಳಿಗೆ ಖಾಸಗಿ ಬಸ್‌ಗಳೇ ಅನಿವಾರ್ಯವಾಗಿದ್ದವು.

ಸೋಮವಾರ ಡಿಪೋ ಅಧಿಕಾರಿಗಳು ಸಿಬ್ಬಂದಿಗಳ ಮನವೊಲಿಸಿ ಪೊಲೀಸ್ ಭದ್ರತೆಯಲ್ಲಿ 11 ಸಾರಿಗೆ ಬಸ್ ಸಂಚಾರ ಆರಂಭಿಸಿದ್ದವು. ದೊಡ್ಡಬಳ್ಳಾಪುರ-ದಾಬಸ್ ಪೇಟೆ 6, ದೊಡ್ಡಬಳ್ಳಾಪುರ-ದೇವನಹಳ್ಳಿ 2, ದೊಡ್ಡಬಳ್ಳಾಪುರ- ಮಧುರೆ 2 ಹಾಗೂ ದೊಡ್ಡಬಳ್ಳಾಪುರ-ನಂದಿ ಕ್ರಾಸ್ ನಡುವೆ ಒಂದು ಬಸ್ ಮಾತ್ರ ಸಂಚರಿಸಿದವು.

ನಗರದ ಕೊಂಗಾಡಿಯಪ್ಪ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳು ತುಂಬಿದ್ದ ದೃಶ್ಯ ಕಂಡು ಬಂದರೆ, ಇದರ ಸಮೀಪವೇ ಇರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಖಾಲಿಯಾಗಿದ್ದು, ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಪೊಲೀಸರು ಮಾತ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT