<p><strong>ದೇವನಹಳ್ಳಿ:</strong> ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ. 9ರಿಂದ 13ರವರೆಗೆ ಜಿಲ್ಲೆಯ ಎಲ್ಲ ಬ್ಯಾಂಕ್ಗಳಲ್ಲಿ ಐದು ದಿನ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.</p>.<p>ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಪ್ತಾಹದ ಪೋಸ್ಟರನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಡುಗಡೆ ಮಾಡಿದರು.</p>.<p>ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಕ ಬ್ಯಾಂಕ್ ಮೂಲಕ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. 268 ಬ್ಯಾಂಕ್ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಕೆವೈಸಿ ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದೆ. ಕೆವೈಸಿ ಪ್ರಾಮುಖ್ಯತೆ ಹಾಗೂ ಅಧಿಕೃತವಾಗಿ ಮಾನ್ಯವಾದ ದಾಖಲೆಗಳ ಬಗೆಗಿನ ವಿಚಾರ, ರಿ-ಕೆವೈಸಿ, ವಿಡಿಯೋ ಕೆವೈಸಿ, ಸಿ-ಕೆವೈಸಿ, ಆಧಾರ್ ಒಟಿಪಿ ಆಧಾರಿತ ಇ- ಕೆವೈಸಿಗಳ ಬಗ್ಗೆ ಮಾಹಿತಿ ಕುರಿತಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳಲ್ಲಿ ಪ್ರತಿದಿನ ಒಂದೊಂದು ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರಿವು ಮೂಡಿಸಲಾಗುತ್ತದೆ.</p>.<p>ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಮಾಂಜಿ, ಜೈಶೇಖರ್, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ. 9ರಿಂದ 13ರವರೆಗೆ ಜಿಲ್ಲೆಯ ಎಲ್ಲ ಬ್ಯಾಂಕ್ಗಳಲ್ಲಿ ಐದು ದಿನ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.</p>.<p>ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಪ್ತಾಹದ ಪೋಸ್ಟರನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಡುಗಡೆ ಮಾಡಿದರು.</p>.<p>ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಕ ಬ್ಯಾಂಕ್ ಮೂಲಕ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. 268 ಬ್ಯಾಂಕ್ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಕೆವೈಸಿ ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದೆ. ಕೆವೈಸಿ ಪ್ರಾಮುಖ್ಯತೆ ಹಾಗೂ ಅಧಿಕೃತವಾಗಿ ಮಾನ್ಯವಾದ ದಾಖಲೆಗಳ ಬಗೆಗಿನ ವಿಚಾರ, ರಿ-ಕೆವೈಸಿ, ವಿಡಿಯೋ ಕೆವೈಸಿ, ಸಿ-ಕೆವೈಸಿ, ಆಧಾರ್ ಒಟಿಪಿ ಆಧಾರಿತ ಇ- ಕೆವೈಸಿಗಳ ಬಗ್ಗೆ ಮಾಹಿತಿ ಕುರಿತಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳಲ್ಲಿ ಪ್ರತಿದಿನ ಒಂದೊಂದು ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರಿವು ಮೂಡಿಸಲಾಗುತ್ತದೆ.</p>.<p>ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಮಾಂಜಿ, ಜೈಶೇಖರ್, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>