ರೈತ ರಾಜಣ್ಣ ಅವರು ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಿ ಮಲಗಿದ್ದ ಸಮಯದಲ್ಲಿ ಗುರುವಾರ ರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಅಪರಿಚಿತರು ಕೊಟ್ಟಿಗೆಯ ಸುತ್ತಲು ಹೊದಿಸಲಾಗಿದ್ದ ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ಕೊಟ್ಟಿಗೆಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ರಾಜಣ್ಣ ಅವರಿಗೆ ತಿಳಿಸಿದ್ದು, ಘಟನೆಯಲ್ಲಿ ಎರಡು ಹಸುಗಳು ಗಂಭೀರವಾಗಿ ಗಾಯಗೊಂಡಿದ್ದರೆ, ಹಸುವನ್ನು ಕಾಪಾಡಲು ಮುಂದಾದ ರಾಜಣ್ಣ ಹಾಗೂ ಅವರ ಮಗಳಿಗೆ ಸುಟ್ಟ ಗಾಯಗಳಾಗಿವೆ.