<p><strong>ನೆಲಮಂಗಲ</strong>: ಬೆಂಗಳೂರು–ತುಮಕೂರು ರಸ್ತೆಯ ಅಡಕಮಾರನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯ ಗೋದಾಮು ಗುರುವಾರ ರಾತ್ರಿ ಹೊತ್ತಿ ಉರಿಯಲು ವಿದ್ಯುತ್ ಶಾರ್ಟ್ ಸರ್ಕಿಟ್ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬೇರೆ ಏನಾದರೂ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ರಿಲಯನ್ಸ್ ಕಂಪನಿಗೆ ಸೇರಿದ ದಿನಸಿ ಪದಾರ್ಥಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಅಗ್ನಿ ಅವಘಡ ಸಂಭವಿಸಿದ ವೇಳೆ ಸಿಬ್ಬಂದಿ ಯಾರೂ ಇರಲಿಲ್ಲ. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಮತ್ತು ನೆಲಮಂಗಲ, ಪೀಣ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಮಧ್ಯರಾತ್ರಿವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ, ಸಂಗ್ರಹಿಸಿಟ್ಟಿದ್ದ ದಿನಸಿ ಪದಾರ್ಥಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.</p>.<p>ಹೆದ್ದಾರಿಯಲ್ಲೇ ಸಾಗುತ್ತಿದ್ದ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆ ಹಿಡಿಯಲು ಮುಂದಾಗಿದ್ದರು. ಇದರಿಂದ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಬೆಂಗಳೂರು–ತುಮಕೂರು ರಸ್ತೆಯ ಅಡಕಮಾರನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯ ಗೋದಾಮು ಗುರುವಾರ ರಾತ್ರಿ ಹೊತ್ತಿ ಉರಿಯಲು ವಿದ್ಯುತ್ ಶಾರ್ಟ್ ಸರ್ಕಿಟ್ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬೇರೆ ಏನಾದರೂ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ರಿಲಯನ್ಸ್ ಕಂಪನಿಗೆ ಸೇರಿದ ದಿನಸಿ ಪದಾರ್ಥಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಅಗ್ನಿ ಅವಘಡ ಸಂಭವಿಸಿದ ವೇಳೆ ಸಿಬ್ಬಂದಿ ಯಾರೂ ಇರಲಿಲ್ಲ. ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಮತ್ತು ನೆಲಮಂಗಲ, ಪೀಣ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಮಧ್ಯರಾತ್ರಿವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ, ಸಂಗ್ರಹಿಸಿಟ್ಟಿದ್ದ ದಿನಸಿ ಪದಾರ್ಥಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.</p>.<p>ಹೆದ್ದಾರಿಯಲ್ಲೇ ಸಾಗುತ್ತಿದ್ದ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆ ಹಿಡಿಯಲು ಮುಂದಾಗಿದ್ದರು. ಇದರಿಂದ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>