ಈ ಕುರಿತು ತನಿಖೆ ನಡೆಸಲು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಆರ್.ರವಿಕುಮಾರ್ ಅವರು, ತಂಡವನ್ನು ರಚನೆ ಮಾಡಿದ್ದರು. ಈ ಕುರಿತು ತನಿಖೆ ನಡೆಯುತ್ತಿತ್ತು. ಜೂ.20ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ಅವರು, ಅನುರಾಧ ಪಂಚಾಯಿತಿಯಲ್ಲಿ ಹಣ ದುರುಪಯೋಗ ಮಾಡಿಕೊಂಡು ನಷ್ಟ ಉಂಟುಮಾಡಿದ್ದಾರೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.