<p><strong>ದೇವನಹಳ್ಳಿ: </strong>ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಕಾರ್ಯಾಲಯದ ದಾಖಲೆ ಕೊಠಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕೆಲ ದಾಖಲೆಗಳು ಸುಟ್ಟು ಹೋಗಿವೆ. ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮರೆ ಮಾಚಲು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.</p>.<p>ಕೋಟ್ಯಂತರ ರೂಪಾಯಿ ಪಂಚಾಯಿತಿಗೆ ನಷ್ಟ ಉಂಟಾಗಿದೆ. ನಕಲಿ ರಸೀದಿ ಪುಸ್ತಕಗಳನ್ನು ಬಳಕೆ ಮಾಡಿಕೊಂಡು, ಹಣ ದುರುಪಯೋಗ ಮಾಡಲಾಗಿದೆ ಎನ್ನುವ ಆರೋಪದಡಿ ಕಂಪ್ಯೂಟರ್ ಆಪರೇಟರ್ ಅನುರಾಧ ಎಂಬುವವರನ್ನು ಅಮಾನತು ಪಡಿಸಲಾಗಿತ್ತು.</p>.<p>ಈ ಕುರಿತು ತನಿಖೆ ನಡೆಸಲು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಆರ್.ರವಿಕುಮಾರ್ ಅವರು, ತಂಡವನ್ನು ರಚನೆ ಮಾಡಿದ್ದರು. ಈ ಕುರಿತು ತನಿಖೆ ನಡೆಯುತ್ತಿತ್ತು. ಜೂ.20ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ಅವರು, ಅನುರಾಧ ಪಂಚಾಯಿತಿಯಲ್ಲಿ ಹಣ ದುರುಪಯೋಗ ಮಾಡಿಕೊಂಡು ನಷ್ಟ ಉಂಟುಮಾಡಿದ್ದಾರೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಅದೇ ದಿನ ಅನುರಾಧ ಅವರು, ’ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ಹಣ ವಾಪಸ್ ನೀಡದೆ ಬೆದರಿಕೆ ಹಾಕಿದ್ದಾರೆ. ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಈ ಕುರಿತು ಪ್ರಶ್ನಿಸಿದರೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಅವರು ನನ್ನ ಅಮಾನತು ರದ್ದುಪಡಿಸಲು ₹4ಲಕ್ಷ ಹಣ ಪಡೆದಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಕಾಂತ ಅವರು ₹9ಲಕ್ಷ ಹಣ ಪಡೆದು ವಾಪಸು ನೀಡಿಲ್ಲ. ಪಂಚಾಯಿತಿಯಲ್ಲಿ ಎಲ್ಲೆಲ್ಲಿ ಅಕ್ರಮ ನಡೆದಿವೆ ಎಂಬುದು ನನಗೆ ಗೊತ್ತಿದೆ. ಆದ್ದರಿಂದ ನನ್ನನ್ನು ಅಮಾನತ್ತು ಮಾಡಿಸಿದ್ದಾರೆ’ ಎಂದು ಮೂರು ಜನರ ಮೇಲೆ ಅನುರಾಧ ದೂರು ನೀಡಿದ್ದಾರೆ.</p>.<p>ಈ ಎಲ್ಲ ಬೆಳವಣಿಗೆಗಳ ನಡುವೆ ಸೋಮವಾರ ರಾತ್ರಿ ಪಂಚಾಯಿತಿಯಲ್ಲಿ ದಾಖಲೆಗಳಿರುವ ಕೊಠಡಿ ಗಾಜು ಹೊಡೆದು ಬೆಂಕಿ ಹಚ್ಚಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಕಾರ್ಯಾಲಯದ ದಾಖಲೆ ಕೊಠಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕೆಲ ದಾಖಲೆಗಳು ಸುಟ್ಟು ಹೋಗಿವೆ. ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮರೆ ಮಾಚಲು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.</p>.<p>ಕೋಟ್ಯಂತರ ರೂಪಾಯಿ ಪಂಚಾಯಿತಿಗೆ ನಷ್ಟ ಉಂಟಾಗಿದೆ. ನಕಲಿ ರಸೀದಿ ಪುಸ್ತಕಗಳನ್ನು ಬಳಕೆ ಮಾಡಿಕೊಂಡು, ಹಣ ದುರುಪಯೋಗ ಮಾಡಲಾಗಿದೆ ಎನ್ನುವ ಆರೋಪದಡಿ ಕಂಪ್ಯೂಟರ್ ಆಪರೇಟರ್ ಅನುರಾಧ ಎಂಬುವವರನ್ನು ಅಮಾನತು ಪಡಿಸಲಾಗಿತ್ತು.</p>.<p>ಈ ಕುರಿತು ತನಿಖೆ ನಡೆಸಲು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಆರ್.ರವಿಕುಮಾರ್ ಅವರು, ತಂಡವನ್ನು ರಚನೆ ಮಾಡಿದ್ದರು. ಈ ಕುರಿತು ತನಿಖೆ ನಡೆಯುತ್ತಿತ್ತು. ಜೂ.20ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ಅವರು, ಅನುರಾಧ ಪಂಚಾಯಿತಿಯಲ್ಲಿ ಹಣ ದುರುಪಯೋಗ ಮಾಡಿಕೊಂಡು ನಷ್ಟ ಉಂಟುಮಾಡಿದ್ದಾರೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಅದೇ ದಿನ ಅನುರಾಧ ಅವರು, ’ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ಹಣ ವಾಪಸ್ ನೀಡದೆ ಬೆದರಿಕೆ ಹಾಕಿದ್ದಾರೆ. ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಈ ಕುರಿತು ಪ್ರಶ್ನಿಸಿದರೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಅವರು ನನ್ನ ಅಮಾನತು ರದ್ದುಪಡಿಸಲು ₹4ಲಕ್ಷ ಹಣ ಪಡೆದಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಕಾಂತ ಅವರು ₹9ಲಕ್ಷ ಹಣ ಪಡೆದು ವಾಪಸು ನೀಡಿಲ್ಲ. ಪಂಚಾಯಿತಿಯಲ್ಲಿ ಎಲ್ಲೆಲ್ಲಿ ಅಕ್ರಮ ನಡೆದಿವೆ ಎಂಬುದು ನನಗೆ ಗೊತ್ತಿದೆ. ಆದ್ದರಿಂದ ನನ್ನನ್ನು ಅಮಾನತ್ತು ಮಾಡಿಸಿದ್ದಾರೆ’ ಎಂದು ಮೂರು ಜನರ ಮೇಲೆ ಅನುರಾಧ ದೂರು ನೀಡಿದ್ದಾರೆ.</p>.<p>ಈ ಎಲ್ಲ ಬೆಳವಣಿಗೆಗಳ ನಡುವೆ ಸೋಮವಾರ ರಾತ್ರಿ ಪಂಚಾಯಿತಿಯಲ್ಲಿ ದಾಖಲೆಗಳಿರುವ ಕೊಠಡಿ ಗಾಜು ಹೊಡೆದು ಬೆಂಕಿ ಹಚ್ಚಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>