ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಸ್ಟೇಷನರಿ ಮಳಿಗೆಗೆ ಬೆಂಕಿ, ಅಪಾರ ನಷ್ಟ

Last Updated 10 ನವೆಂಬರ್ 2019, 11:33 IST
ಅಕ್ಷರ ಗಾತ್ರ

ದೇವನಹಳ್ಳಿ: ನಗರದ ಹಳೆಬಸ್‌ ನಿಲ್ದಾಣದಿಂದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಪ್ರಮುಖ ರಸ್ತೆಯಲ್ಲಿರುವ ಸ್ಟೇಷನರಿ ಮಳಿಗೆಗೆ ಸಂಜೆ ಬೆಂಕಿ ಬಿದ್ದ ಪರಿಣಾಮ ಅಪಾರ ನಷ್ಟವಾಗಿದೆ.

ಮಳಿಗೆ ಮಾಲೀಕ ವಿಜಯಕುಮಾರ್‌ ಎಂಬುವವರಿಗೆ ಸೇರಿ ದುರ್ಗಾಸ್ಟೋರ್‌ ಮಳಿಗೆ ಮೇಲಿನ ಸ್ಟೇಷನರಿ ದಾಸ್ತಾನು ಕೊಠಡಿಗೆ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಅಗ್ನಿ ಆಕಸ್ಮಿಕ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆಯ ನಂತರ ಬೆಂಕಿಗೆ ಕಾರಣ ಮತ್ತು ಎಷ್ಟು ನಷ್ಠವಾಗಿದೆ ಎಂದು ಅಂದಾಜಿಸಬಹುದು. ಅಗ್ನಿಶಾಮಕ ದಳದ ನೆರವಿನಿಂದ ಬೆಂಕಿ ನಂದಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT