<p><strong>ವಿಜಯಪುರ(ದೇವನಹಳ್ಳಿ):</strong> ಹೋಬಳಿಯ ಕೋರಮಂಗಲ ಅರಣ್ಯ ಪ್ರದೇಶದಲ್ಲಿನ ನೀಲಗಿರಿ ತೋಪಿನಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿಹೊತ್ತಿಕೊಂಡು ಅಪಾರ ಪ್ರಮಾಣದಲ್ಲಿ ಮರಗಿಡಗಳು ಸುಟ್ಟುಹೋಗಿವೆ. ಅರಣ್ಯ ಇಲಾಖೆಯ ಕಾವಲುಗಾರರು ಬೆಂಕಿ ನಂದಿಸಲು ಹರಸಾಹಸ ಪಟ್ಟರು.</p>.<p>ನೀಲಗಿರಿ ತೋಪಿನಲ್ಲಿ ಬೆಂಕಿ ಹೊತ್ತುಕೊಂಡು ದಟ್ಟವಾದ ಹೊಗೆಯು ಆವರಿಸಿಕೊಳ್ಳುತ್ತಿದ್ದಂತೆ ಗೂಡುಗಳು ಕಟ್ಟಿಕೊಂಡು, ಮರಿಗಳು ಮಾಡಿದ್ದ ಪಕ್ಷಿಗಳು ತಮ್ಮ ಮರಿಗಳು ಬೆಂಕಿಗೆ ಆಹುತಿಯಾಗುತ್ತಿರುವುದನ್ನು ಕಂಡು ಚೀರಾಡುತ್ತಿದ್ದವು. ನವಿಲುಗಳು ಹಾರಿ ಬಂದು ಮತ್ತೊಂದು ಕಡೆಯಲ್ಲಿರುವ ಅರಣ್ಯದೊಳಗೆ ಸೇರಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು.</p>.<p>ಸೋಮವಾರ ಮಧ್ಯಾಹ್ನ ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ್ದಾರೆ ಎನ್ನಲಾಗಿದೆ. ನೀಲಗಿರಿ ತೋಪಿನಲ್ಲಿ ಆವರಿಸಿಕೊಂಡ ಬೆಂಕಿಯಿಂದ ದಟ್ಟವಾಗಿ ಹೊಗೆ ಹಬ್ಬಿಕೊಂಡಿತ್ತು.</p>.<p>ಸ್ಥಳದಲ್ಲಿ ಇದ್ದವರು ತೋಪಿನಲ್ಲಿದ್ದ ಹಸಿಗಿಡಗಳನ್ನು ಕಿತ್ತುಕೊಂಡು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸಾಧ್ಯವಾಗದೆ ಇದ್ದಾಗ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಪ್ರತಿವರ್ಷ ಬೇಸಿಗೆಯಲ್ಲಿ ಈ ಅರಣ್ಯದಲ್ಲಿ ಬೆಂಕಿ ಹೊತ್ತುಕೊಂಡು ಅಪಾರ ಪ್ರಮಾಣದಲ್ಲಿ ಪಕ್ಷಿಗಳು, ಸಣ್ಣ ಸಣ್ಣ ಪ್ರಾಣಿಗಳು ಸುಟ್ಟುಹೋಗುತ್ತಿದ್ದರೂ ಅರಣ್ಯ ಇಲಾಖೆಯವರು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ):</strong> ಹೋಬಳಿಯ ಕೋರಮಂಗಲ ಅರಣ್ಯ ಪ್ರದೇಶದಲ್ಲಿನ ನೀಲಗಿರಿ ತೋಪಿನಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿಹೊತ್ತಿಕೊಂಡು ಅಪಾರ ಪ್ರಮಾಣದಲ್ಲಿ ಮರಗಿಡಗಳು ಸುಟ್ಟುಹೋಗಿವೆ. ಅರಣ್ಯ ಇಲಾಖೆಯ ಕಾವಲುಗಾರರು ಬೆಂಕಿ ನಂದಿಸಲು ಹರಸಾಹಸ ಪಟ್ಟರು.</p>.<p>ನೀಲಗಿರಿ ತೋಪಿನಲ್ಲಿ ಬೆಂಕಿ ಹೊತ್ತುಕೊಂಡು ದಟ್ಟವಾದ ಹೊಗೆಯು ಆವರಿಸಿಕೊಳ್ಳುತ್ತಿದ್ದಂತೆ ಗೂಡುಗಳು ಕಟ್ಟಿಕೊಂಡು, ಮರಿಗಳು ಮಾಡಿದ್ದ ಪಕ್ಷಿಗಳು ತಮ್ಮ ಮರಿಗಳು ಬೆಂಕಿಗೆ ಆಹುತಿಯಾಗುತ್ತಿರುವುದನ್ನು ಕಂಡು ಚೀರಾಡುತ್ತಿದ್ದವು. ನವಿಲುಗಳು ಹಾರಿ ಬಂದು ಮತ್ತೊಂದು ಕಡೆಯಲ್ಲಿರುವ ಅರಣ್ಯದೊಳಗೆ ಸೇರಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು.</p>.<p>ಸೋಮವಾರ ಮಧ್ಯಾಹ್ನ ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಸಮಯದಲ್ಲಿ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ್ದಾರೆ ಎನ್ನಲಾಗಿದೆ. ನೀಲಗಿರಿ ತೋಪಿನಲ್ಲಿ ಆವರಿಸಿಕೊಂಡ ಬೆಂಕಿಯಿಂದ ದಟ್ಟವಾಗಿ ಹೊಗೆ ಹಬ್ಬಿಕೊಂಡಿತ್ತು.</p>.<p>ಸ್ಥಳದಲ್ಲಿ ಇದ್ದವರು ತೋಪಿನಲ್ಲಿದ್ದ ಹಸಿಗಿಡಗಳನ್ನು ಕಿತ್ತುಕೊಂಡು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸಾಧ್ಯವಾಗದೆ ಇದ್ದಾಗ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಪ್ರತಿವರ್ಷ ಬೇಸಿಗೆಯಲ್ಲಿ ಈ ಅರಣ್ಯದಲ್ಲಿ ಬೆಂಕಿ ಹೊತ್ತುಕೊಂಡು ಅಪಾರ ಪ್ರಮಾಣದಲ್ಲಿ ಪಕ್ಷಿಗಳು, ಸಣ್ಣ ಸಣ್ಣ ಪ್ರಾಣಿಗಳು ಸುಟ್ಟುಹೋಗುತ್ತಿದ್ದರೂ ಅರಣ್ಯ ಇಲಾಖೆಯವರು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>