ಸೂಲಿಬೆಲೆ-ಗಿಡ್ಡಪ್ಪನಹಳ್ಳಿ ರಸ್ತೆಯ ಬದಿಯಲ್ಲಿರುವ ಖಾಲಿ ಮೈದಾನದಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯವನ್ನು ಸುರಿದು ಸುಡುತ್ತಿದ್ದಾರೆ. ಕಲುಷಿತ ಹೊಗೆಯಿಂದ ಈ ಭಾಗದಲ್ಲಿ ಓಡಾಡುವ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಹಾಗೂ ಹೊಗೆಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.