<p><strong>ದೇವನಹಳ್ಳಿ:</strong> ರಾಯಪುರದಿಂದ ಮಂಗಳೂರಿಗೆ ಬರುತ್ತಿದ್ದ ಅಪೆಕ್ಸ್ ವಿಸ್ಟಾ ಏರ್ಲೈನ್ಸ್ನ ಏರ್ಬಸ್–321 ವಿಮಾನವನ್ನು ಗುರುವಾರ ಅಪಹರಿಸಿದ ಅಪಹರಣಕಾರರು ವಿಮಾನವನ್ನು ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಸಿದರು!</p>.<p>ಹೈಜಾಕ್ ಆಗಿದ್ದ ವಿಮಾನದಲ್ಲಿದ್ದ 30 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿಯನ್ನು ಸುರಕ್ಷಿತ ಬಿಡುಗಡೆ ಮಾಡಲು ಅಪಹರಣಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಅಪಹರಣಕಾರರು ಒಬ್ಬ ಪ್ರಯಾಣಿಕನನ್ನು ಕೊಂದರು.</p>.<p>ತುರ್ತು ಪ್ರತಿಕ್ರಿಯೆ ಕ್ರಮವಾಗಿ ವಿಮಾನ ನಿಲ್ದಾಣದ ಎರಡೂ ರನ್ವೇಗಳನ್ನು ಕೆಲಕಾಲ ವಿಮಾನ ಸಂಚಾರಕ್ಕೆ ಮುಚ್ಚಲಾಗಿತ್ತು. ಅಪಹರಣಕಾರರೊಂದಿಗೆ ಮಾತುಕತೆ ನಡೆಸಲು ಸಂಧಾನಕಾರರನ್ನು ನಿಯೋಜಿಸಲಾಗಿದ್ದು, ಬಳಿಕ ಅವರು ಪ್ರಯಾಣಿಕರನ್ನು ಬಿಡುಗಡೆಗೆ ಮನವೊಲಿಸಿದರು. ಇನ್ನುಳಿದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಭದ್ರತಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿದರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ಹೈಜಾಕ್ ಅಣುಕು ಪ್ರದರ್ಶನದ ಈ ದೃಶ್ಯಗಳು ವಿಮಾನ ಅಪಹರಣದ ನೈಜ ದೃಶ್ಯಗಳನ್ನು ನೆನಪಿಸಿದವು.</p>.<p>ಇದೊಂದು ಅಣುಕು ಕಾರ್ಯಾಚರಣೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಖಚಿತಪಡಿಸುವ ಉದ್ದೇಶದಿಂದ ಈ ಅಣುಕು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಅಣುಕು ಕಾರ್ಯಾಚರಣೆ ಬಳಿಕ ಸಂಪೂರ್ಣ ಮೌಲ್ಯಮಾಪನ ನಡೆಸಿ, ತುರ್ತು ಪ್ರತಿಕ್ರಿಯೆ ವ್ಯವಸ್ಥೆ, ಸಂವಹನ ವ್ಯವಸ್ಥೆ ಹಾಗೂ ವಿವಿಧ ಸಂಸ್ಥೆಗಳ ಸಮನ್ವಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಯಪುರದಿಂದ ಮಂಗಳೂರಿಗೆ ಬರುತ್ತಿದ್ದ ಅಪೆಕ್ಸ್ ವಿಸ್ಟಾ ಏರ್ಲೈನ್ಸ್ನ ಏರ್ಬಸ್–321 ವಿಮಾನವನ್ನು ಗುರುವಾರ ಅಪಹರಿಸಿದ ಅಪಹರಣಕಾರರು ವಿಮಾನವನ್ನು ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಸಿದರು!</p>.<p>ಹೈಜಾಕ್ ಆಗಿದ್ದ ವಿಮಾನದಲ್ಲಿದ್ದ 30 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿಯನ್ನು ಸುರಕ್ಷಿತ ಬಿಡುಗಡೆ ಮಾಡಲು ಅಪಹರಣಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಅಪಹರಣಕಾರರು ಒಬ್ಬ ಪ್ರಯಾಣಿಕನನ್ನು ಕೊಂದರು.</p>.<p>ತುರ್ತು ಪ್ರತಿಕ್ರಿಯೆ ಕ್ರಮವಾಗಿ ವಿಮಾನ ನಿಲ್ದಾಣದ ಎರಡೂ ರನ್ವೇಗಳನ್ನು ಕೆಲಕಾಲ ವಿಮಾನ ಸಂಚಾರಕ್ಕೆ ಮುಚ್ಚಲಾಗಿತ್ತು. ಅಪಹರಣಕಾರರೊಂದಿಗೆ ಮಾತುಕತೆ ನಡೆಸಲು ಸಂಧಾನಕಾರರನ್ನು ನಿಯೋಜಿಸಲಾಗಿದ್ದು, ಬಳಿಕ ಅವರು ಪ್ರಯಾಣಿಕರನ್ನು ಬಿಡುಗಡೆಗೆ ಮನವೊಲಿಸಿದರು. ಇನ್ನುಳಿದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಭದ್ರತಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿದರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ಹೈಜಾಕ್ ಅಣುಕು ಪ್ರದರ್ಶನದ ಈ ದೃಶ್ಯಗಳು ವಿಮಾನ ಅಪಹರಣದ ನೈಜ ದೃಶ್ಯಗಳನ್ನು ನೆನಪಿಸಿದವು.</p>.<p>ಇದೊಂದು ಅಣುಕು ಕಾರ್ಯಾಚರಣೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ಬಳಕೆದಾರರ ಸುರಕ್ಷತೆ ಖಚಿತಪಡಿಸುವ ಉದ್ದೇಶದಿಂದ ಈ ಅಣುಕು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.</p>.<p>ಅಣುಕು ಕಾರ್ಯಾಚರಣೆ ಬಳಿಕ ಸಂಪೂರ್ಣ ಮೌಲ್ಯಮಾಪನ ನಡೆಸಿ, ತುರ್ತು ಪ್ರತಿಕ್ರಿಯೆ ವ್ಯವಸ್ಥೆ, ಸಂವಹನ ವ್ಯವಸ್ಥೆ ಹಾಗೂ ವಿವಿಧ ಸಂಸ್ಥೆಗಳ ಸಮನ್ವಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>