ರಾತ್ರಿ 12 ಗಂಟೆಗೆ ಕರಗದ ಪೂಜಾರಿ ಲಕ್ಕೂರಿನ ಉಮೇಶ್ ಅವರು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗವನ್ನು ಹೊತ್ತು ವೀರಕುಮಾರರೊಂದಿಗೆ ಸಾಗಿ ಬಂದು ಸರ್ಕಾರಿ ಶಾಲೆಯ ಮೈದಾನದಲ್ಲಿ ಸೇರಿದ್ದ ಜನಸಮೂಹದ ನಡುವೆ ವಾದ್ಯಗೋಷ್ಠಿಯವರು ನುಡಿಸಿದ ವಿವಿಧ ಹಾಡುಗಳು, ತಮಟೆ ವಾದನಗಳು, ಮಂಗಳ ವಾದ್ಯಗಳ ತಾಳಕ್ಕೆ ನರ್ತಿಸುವ ಮೂಲಕ ಸೇರಿದ್ದವರನ್ನು ರಂಜಿಸಿದರು.