ಈ ಬಗ್ಗೆ ಮಾಹಿತಿ ನೀಡಿದ ಡಿವೈಎಸ್ಪಿ ಟಿ.ರಂಗಪ್ಪ, ‘ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸಹ ಆಹಾರ ಪೊಟ್ಟಣಗಳನ್ನು ಒಂದೆಡೆ ಸಿದ್ದಪಡಿಸಿ ಅನಾಥರು, ಬಡವರು ವಾಸವಾಗಿರುವ ಪ್ರದೇಶಗಳಲ್ಲಿ ದಿನಕ್ಕೆ ಎರಡು ಬಾರಿ ಹಂಚಿಕೆ ಮಾಡುತ್ತಿದ್ದಾರೆ. ಇದಲ್ಲದೆ ಕೆಲ ವ್ಯಕ್ತಿಗಳು, ಕೈಗಾರಿಕಾ ಪ್ರದೇಶದಲ್ಲಿನ ಖಾಸಗಿ ಕಂಪನಿಗಳವರು ಆಹಾರ ಧಾನ್ಯಗಳನ್ನು ಉಚಿತವಾಗಿ ಕಳುಹಿಸಿಕೊಟ್ಟಿದ್ದಾರೆ. ಇವುಗಳನ್ನು ಸಮರ್ಪಕವಾಗಿ ಹಾಗೂ ಅರ್ಹರಿಗೆ ಹಂಚಿಕೆ ಮಾಡಲಾಗುತ್ತಿದೆ’ ಎಂದರು.