ಆನೇಕಲ್: ‘ಸಂಕಷ್ಟದ ಸಮಯದಲ್ಲಿ ಉದ್ಯೋಗಗಳಿಲ್ಲದೇ ನೂರಾರು ಮಂದಿ ವಲಸೆ ಕಾರ್ಮಿಕರು ಹಲವಾರು ಸಮಸ್ಯೆ ಎದುರಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಲು ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದಿರುವುದು ಶ್ಲಾಘನೀಯ’ ಎಂದು ಹಾರಗದ್ದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ನಟರಾಜ್ ತಿಳಿಸಿದರು.