ತಾಲ್ಲೂಕಿನ ಕೇಂದ್ರ ಸ್ಥಾನವಾಗಿರುವ ಪ್ರವಾಸಿ ಮಂದಿರದಲ್ಲಿ ನೂತನ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡಿ ಕಳೆದ ವರ್ಷ ಉದ್ಘಾಟನೆಯಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸಿ ಮಂದಿರದಲ್ಲಿ ಕಟ್ಟಡದ ಮುಂಭಾಗ ವಿವಿಧ ಅಲಂಕಾರಿಕ ಸಸ್ಯಗಳು, ಹಾಸು ಹುಲ್ಲು (ಗ್ರಾಸ್) ಹಾಕಿದ್ದರು. ಅದರ ನಿರ್ವಹಣೆಗೆ ಮುಂದಾಗಿದ್ದ ಸಿಬ್ಬಂದಿಗೆ ಈಗ ನೀರಿನ ಸಮಸ್ಯೆ ಎದುರಾಗಿದೆ. ಇರುವ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಗಿಡಗಳು, ಹುಲ್ಲು ಒಣಗುತ್ತಿದೆ.