<p><strong>ವಿಜಯಪುರ:</strong> ‘ನರೇಗಾ ಯೋಜನೆಯಡಿ ಸಿಗುವಂತಹ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಗ್ರಾಮಾಂತರ ಪ್ರದೇಶಗಳನ್ನು ಅರಣ್ಯೀಕರಣ ಮಾಡಲು ಮುಂದಾಗುವುದು ಉತ್ತಮ ಬೆಳವಣಿಗೆ’ ಎಂದು ಮುಖಂಡ ಶಾಂತಕುಮಾರ್ ತಿಳಿಸಿದರು.</p>.<p>ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮದ ಸ್ಮಶಾನದಲ್ಲಿ ನರೇಗಾ ಯೋಜನೆಯಡಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಳ್ಳಿಗಳು ಸರ್ವತೋಮುಖ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣ, ಕುಂಟೆಗಳ ನಿರ್ಮಾಣವೂ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಳ್ಳಲಿಕ್ಕೆ ನರೇಗಾ ಯೋಜನೆ ಸಹಕಾರಿಯಾಗಿದ್ದು ಜನರು ಈ ಯೋಜನೆಯನ್ನು ಉಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>‘ಈಗಿನಿಂದಲೇ ಅಂತರ್ಜಲವೃದ್ಧಿ ಮಾಡದೇ ಇದ್ದರೆ ಭವಿಷ್ಯದಲ್ಲಿ ನಮ್ಮ ಮಕ್ಕಳಿಗೆ ನಾವೇ ವಿಷ ನೀಡಿದಂತಾಗುತ್ತದೆ. ಆದ್ದರಿಂದ ಅಂತರ್ಜಲ ವೃದ್ಧಿ ಮಾಡಿ ಮಕ್ಕಳ ಭವಿಷ್ಯ ಕಾಪಾಡಬೇಕು’ ಎಂದರು.</p>.<p>ಗ್ರಾಮದ ಮುಖಂಡರಾದ ಬೈರಪ್ಪ, ರಾಜಣ್ಣ ಮಾತನಾಡಿ ಮುಖಂಡರಾದ ಮೋಟಪ್ಪ, ಎ.ಕೇಶವಮೂರ್ತಿ, ಎ.ಮುನಿಯಪ್ಪ, ಲೋಕೇಶ್, ದೇವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ನರೇಗಾ ಯೋಜನೆಯಡಿ ಸಿಗುವಂತಹ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಗ್ರಾಮಾಂತರ ಪ್ರದೇಶಗಳನ್ನು ಅರಣ್ಯೀಕರಣ ಮಾಡಲು ಮುಂದಾಗುವುದು ಉತ್ತಮ ಬೆಳವಣಿಗೆ’ ಎಂದು ಮುಖಂಡ ಶಾಂತಕುಮಾರ್ ತಿಳಿಸಿದರು.</p>.<p>ಚನ್ನರಾಯಪಟ್ಟಣ ಹೋಬಳಿ ಯಲಿಯೂರು ಗ್ರಾಮದ ಸ್ಮಶಾನದಲ್ಲಿ ನರೇಗಾ ಯೋಜನೆಯಡಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಳ್ಳಿಗಳು ಸರ್ವತೋಮುಖ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣ, ಕುಂಟೆಗಳ ನಿರ್ಮಾಣವೂ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಳ್ಳಲಿಕ್ಕೆ ನರೇಗಾ ಯೋಜನೆ ಸಹಕಾರಿಯಾಗಿದ್ದು ಜನರು ಈ ಯೋಜನೆಯನ್ನು ಉಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>‘ಈಗಿನಿಂದಲೇ ಅಂತರ್ಜಲವೃದ್ಧಿ ಮಾಡದೇ ಇದ್ದರೆ ಭವಿಷ್ಯದಲ್ಲಿ ನಮ್ಮ ಮಕ್ಕಳಿಗೆ ನಾವೇ ವಿಷ ನೀಡಿದಂತಾಗುತ್ತದೆ. ಆದ್ದರಿಂದ ಅಂತರ್ಜಲ ವೃದ್ಧಿ ಮಾಡಿ ಮಕ್ಕಳ ಭವಿಷ್ಯ ಕಾಪಾಡಬೇಕು’ ಎಂದರು.</p>.<p>ಗ್ರಾಮದ ಮುಖಂಡರಾದ ಬೈರಪ್ಪ, ರಾಜಣ್ಣ ಮಾತನಾಡಿ ಮುಖಂಡರಾದ ಮೋಟಪ್ಪ, ಎ.ಕೇಶವಮೂರ್ತಿ, ಎ.ಮುನಿಯಪ್ಪ, ಲೋಕೇಶ್, ದೇವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>