ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಈ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಗಮನ ಸೆಳೆಯಲಾಗುವುದು. ಯಾವುದೇ ಕಾರಣಕ್ಕೂ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ನಿರ್ದೇಶನ ನೀಡುವಂತೆ ಒತ್ತಾಯ ಮಾಡಲಾಗುವುದು. ಈಗಾಗಲೇ ಭೂಮಿ ಸ್ವಾಧೀನಪಡಿಸಿಕೊಂಡಿರುವ ರೈತ ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಆದೇಶಿಸುವಂತೆಯೂ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.